ADVERTISEMENT

ಈಜಲು ಹೋದ ಇಬ್ಬರು ವಿದ್ಯಾರ್ಥಿಗಳ ಸಾವು

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2018, 9:25 IST
Last Updated 11 ಡಿಸೆಂಬರ್ 2018, 9:25 IST

ಹುಬ್ಬಳ್ಳಿ: ಕುಂದಗೋಳ ತಾಲ್ಲೂಕಿನ ಬೆಟದೂರು ಗ್ರಾಮದ ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಮಂಗಳವಾರ ಸಾವಿಗೀಡಾಗಿದ್ದಾರೆ.

ಮಲ್ಲಿಕಾರ್ಜುನ ಬಸಪ್ಪ ಉಳ್ಳಾಗಡ್ಡಿ (13) ಹಾಗೂ‌ ಮುತ್ತು ಬಸಪ್ಪ ಬೆಳಗಲಿ (13) ಮೃತಪಟ್ಟವರು.

ಇಬ್ಬರೂ ಬೆಟದೂರು ಸರ್ಕಾರಿ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿಗಳು. ಸಿಯಾಚಿನ್‌ನ ಹಿಮದಡಿ ಸಿಲುಕಿ ಸಾವಿಗೀಡಾಗಿದ್ದ ಯೋಧ ಹನುಮಂತಪ್ಪ ಕೊಪ್ಪದ ಅವರ ಸ್ವಗ್ರಾಮವಾದ ಬೆಟದೂರಿನಲ್ಲಿ ಈ ದುರ್ಘಟನೆ ಸಂಭವಿಸಿದೆ. ಕುಂದಗೋಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.