ಧಾರವಾಡ: ವಿಶ್ವಕರ್ಮ ಸಮಾಜದ ಮುಖಂಡ ಕೆ.ಪಿ. ನಂಜುಂಡಿ ಒಡೆತನದ ಲಕ್ಷ್ಮೀ ಗೋಲ್ಡ್ ಪ್ಯಾಲೇಸ್ನ ಧಾರವಾಡದ ಮಳಿಗೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಗುರುವಾರ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದರು.
ಬೆಳಿಗ್ಗೆ ಸುಮಾರು 9 ಗಂಟೆಗೆ ಅಂಗಡಿ ತೆರೆಯುತ್ತಿದ್ದಂತೆ ಬಂದ ನಾಲ್ಕು ಅಧಿಕಾರಿಗಳು ಅಂಗಡಿ ಪ್ರವೇಶಿಸಿ ದಾಖಲೆ ತೋರಿಸುವಂತೆ ಅಲ್ಲಿನ ಸಿಬ್ಬಂದಿಗೆ ತಿಳಿಸಿದರು. ನಂತರ ಅಂಗಡಿಯ ಬಾಗಿಲು ಏಕಾ ಏಕಿ ಹಾಕಿದ್ದರಿಂದ ಸುತ್ತಮುತ್ತಲಿನ ಜನರು ಆಶ್ಚರ್ಯಚಕಿತರಾದರು. ಒಳಗಿದ್ದ ಸಿಬ್ಬಂದಿಯೂ ಕಕ್ಕಾಬಿಕ್ಕಿಯಾದರು. ಅವರೆಲ್ಲರನ್ನೂ ಒಂದೆಡೆ ಕೂರಿಸಿದ ಅಧಿಕಾರಿಗಳು ದಾಖಲೆ ಪರಿಶೀಲನೆ ಆರಂಭಿಸಿದರು.
ಸಂಜೆಯವರೆಗೂ ನಿರಂತರ ಪರಿಶೀಲನೆ ನಡೆಸಿದ ಅಧಿಕಾರಿಗಳು ದಾಳಿಯ ಯಾವುದೇ ಮಾಹಿತಿ ನೀಡಲು ನಿರಾಕರಿಸಿದರು. ಎಲ್ಲವನ್ನೂ ಬೆಂಗಳೂರಿನಿಂದ ಬಿಡುಗಡೆ ಮಾಡುವುದಾಗಿ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.