ಧಾರವಾಡ: ಇಲ್ಲಿನ ಕಲಾಭವನದ ಆವರಣದಲ್ಲಿ ನಾಲ್ಕೈದು ದಶಕಗಳಿಂದ ಬೆಳೆದು ನಿಂತ ಹೆಮ್ಮರಗಳನ್ನು ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕಾಗಿ ಗುರುವಾರ ರಾತ್ರಿ ಧರೆಗರುಳಿಸಲಾಯಿತು.
ಜೆಸಿಬಿ ಸಹಾಯದಿಂದ ಮರಗಳನ್ನು ತೆರವು ಗೊಳಿಸಲು ಮುಂದಾದಾಗ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದಾಗ ಜೆಸಿಬಿ ಹಾಗೂ ಎರಡು ಟ್ರ್ಯಾಕ್ಟರ್ಗಳನ್ನು ಕಲಾಭವನದ ಆವರಣದಲ್ಲಿಯೇ ಬಿಟ್ಟು ಚಾಲಕರು ಪರಾರಿಯಾಗಿದ್ದಾರೆ.
ಬಳಿಕ ವಿಷಯ ತಿಳಿದು ಸ್ಥಳಕ್ಕೆ ಬಂದ ವಲಯ ಅರಣ್ಯಾಧಿಕಾರಿ ವಿಜಯಕುಮಾರ ಗಿರಿತಮ್ಮಣ್ಣವರ, ಜೆಸಿಬಿ ಹಾಗೂ ಟ್ರ್ಯಾಕ್ಟರ್ಗಳನ್ನು ವಶಕ್ಕೆ ಪಡೆದುಕೊಂಡರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.