ADVERTISEMENT

₹82 ಲಕ್ಷ ಅಕ್ರಮ ಸಾಗಾಟ; ಬಂಧನ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2021, 10:04 IST
Last Updated 28 ಆಗಸ್ಟ್ 2021, 10:04 IST

ಹುಬ್ಬಳ್ಳಿ: ಬಾಗಲಕೋಟೆಯಿಂದ ಹುಬ್ಬಳ್ಳಿಗೆ ಶಿಫ್ಟ್‌ ಡಿಸೈರ್‌ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹82 ಲಕ್ಷವನ್ನು ಕೇಶ್ವಾಪುರ ಠಾಣೆ ಪೊಲೀಸರು ವಶಪಡಿಸಿಕೊಂಡು, ಚಾಲಕನನ್ನು ಬಂಧಿಸಿದ್ದಾರೆ.

ರಾಜಸ್ಥಾನ ಮೂಲದ ಹಾಲಿ ಬಾಗಲಕೋಟೆಯ ಟಾಂಗಾ ನಿಲ್ದಾಣದ ಭವಾನಿ ಟೀ ಸ್ಟಾಲ್‌ ಸನಿಹದ ನಿವಾಸಿ ಗೋಕುಲರಾಮ ರಬಾರಿ ಬಂಧಿತ ವ್ಯಕ್ತಿ. ಖಚಿತ ಮಾಹಿತಿ ಮೇರೆಗೆ ಇನ್‌ಸ್ಪೆಕ್ಟರ್‌ ಜಗದೀಶ ಹಂಚಿನಾಳ ನೇತೃತ್ವದ ತಂಡ ಶುಕ್ರವಾರ ತಡರಾತ್ರಿ ನಗರದ ಕುಸಗಲ್‌ ರಸ್ತೆಯ ಆಕ್ಸ್‌ಫರ್ಡ್‌ ಕಾಲೇಜು ಬಳಿ ಕಾರು ತಡೆದು ತಪಾಸಣೆ ನಡೆಸಿದೆ. ಆ ವೇಳೆ ₹82,72,500 ನಗದು ದೊರೆತಿದೆ. ಹಣಕ್ಕೆ ಸಂಬಂಧಿಸಿ ಚಾಲಕ ಗೋಕುಲರಾಮನನ್ನು ವಿಚಾರಿಸಿದಾಗ ಸರಿಯಾದ ಉತ್ತರ ನೀಡದೆ, ದಾಖಲೆಗಳನ್ನು ನೀಡಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸರು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT