ADVERTISEMENT

ಹುಬ್ಬಳ್ಳಿ ಹೊರವಲಯದಲ್ಲಿ ಕಾರು ಪಲ್ಟಿ; ಯುವಕ ಸಾವು

​ಪ್ರಜಾವಾಣಿ ವಾರ್ತೆ
Published 1 ಜನವರಿ 2022, 7:44 IST
Last Updated 1 ಜನವರಿ 2022, 7:44 IST

ಹುಬ್ಬಳ್ಳಿ:ನಗರದ ಹೊರವಲಯದ ಅಂಚಟಗೇರಿಯ ರಾಯನಾಳ ಕ್ರಾಸ್ ಬಳಿ ಕಾರು ಪಲ್ಟಿಯಾಗಿ, ಅದರಲ್ಲಿದ್ದ ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗಾಯಗೊಂಡ ನಾಲ್ವರನ್ನು‌ ಕಿಮ್ಸ್'ಗೆ ದಾಖಲಿಸಲಾಗಿದೆ.

ಮಹಾವೀರ ಗಲ್ಲಿಯ ಗಣೇಶ ಬಂಡಿ(26) ಮೃತಪಟ್ಟವರು. ಕಾರಿನಲ್ಲಿ ಐವರು ಪ್ರಯಾಣಿಸುತ್ತಿದ್ದು, ಹುಬ್ಬಳ್ಳಿಯಿಂದ ಯಲ್ಲಾಪುರಕ್ಕೆ ಹೊರಟಿದ್ದರು. ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT