ADVERTISEMENT

ಹುಬ್ಬಳ್ಳಿ: ಮೂಲಸೌಕರ್ಯ ಕಲ್ಪಿಸಲು ಎಎಪಿ ಮನವಿ

​ಪ್ರಜಾವಾಣಿ ವಾರ್ತೆ
Published 23 ಜೂನ್ 2022, 2:43 IST
Last Updated 23 ಜೂನ್ 2022, 2:43 IST
ಹುಬ್ಬಳ್ಳಿಯ ನೇಕಾರ ನಗರದ ಬೇಪಾರಿ ಪ್ಲಾಟ್‌, ವಾಣಿ ಪ್ಲಾಟ್‌ ಪ್ರದೇಶಗಳ ಜನರಿಗೆ ಮೂಲಸೌಕರ್ಯ ಒದಗಿಸಬೇಕೆಂದು ಆಮ್ ಆದ್ಮಿ ಪಕ್ಷದ ಮುಖಂಡರು ಹು–ಧಾ ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತ ಶಂಕರಾನಂದ ಬನಶಂಕರಿ ಅವರಿಗೆ ಬುಧವಾರ ಮನವಿ ಸಲ್ಲಿಸಿದರು
ಹುಬ್ಬಳ್ಳಿಯ ನೇಕಾರ ನಗರದ ಬೇಪಾರಿ ಪ್ಲಾಟ್‌, ವಾಣಿ ಪ್ಲಾಟ್‌ ಪ್ರದೇಶಗಳ ಜನರಿಗೆ ಮೂಲಸೌಕರ್ಯ ಒದಗಿಸಬೇಕೆಂದು ಆಮ್ ಆದ್ಮಿ ಪಕ್ಷದ ಮುಖಂಡರು ಹು–ಧಾ ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತ ಶಂಕರಾನಂದ ಬನಶಂಕರಿ ಅವರಿಗೆ ಬುಧವಾರ ಮನವಿ ಸಲ್ಲಿಸಿದರು   

ಹುಬ್ಬಳ್ಳಿ: ಹುಬ್ಬಳ್ಳಿಯ ಪೂರ್ವ ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ 72 ಮತ್ತು 73ರ ನೇಕಾರ ನಗರದ ಬೇಪಾರಿ ಪ್ಲಾಟ್‌, ವಾಣಿ ಪ್ಲಾಟ್‌ ಪ್ರದೇಶಗಳ ಜನರಿಗೆ ಮೂಲಸೌಕರ್ಯ ಒದಗಿಸಬೇಕೆಂದು ಆಮ್ ಆದ್ಮಿ ಪಕ್ಷದ ಮುಖಂಡರು ಹೆಚ್ಚುವರಿ ಆಯುಕ್ತ ಶಂಕರಾನಂದ ಬನಶಂಕರಿ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.

ಎರಡೂ ವಾರ್ಡ್‌ಗಳಲ್ಲಿ ಕುಡಿಯುವ ನೀರು, ಸ್ವಚ್ಛತೆ ಮತ್ತು ಒಳಚರಂಡಿ ವ್ಯವಸ್ಥೆ ಸಮರ್ಪಕವಾಗಿಲ್ಲ. ಪಾಲಿಕೆಯ ಅಧಿಕಾರಿಗಳು ಸಮಸ್ಯೆ ಪರಿಹರಿಸಲು ಶೀಘ್ರ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಎಎಪಿಯ ಜಿಲ್ಲಾ ಘಟಕದ ಅಧ್ಯಕ್ಷ ಅನಂತಕುಮಾರ ಬುಗಡಿ, ಮಲ್ಲಿಕಾರ್ಜುನಯ್ಯ ಹಿರೇಮಠ, ಬಾಷಾ ಹುಸೇನ್ ತಲೆವಾಡ, ಮಲ್ಲಪ್ಪಾ ತಡಸದ, ರೇವಣಸಿದ್ದಪ್ಪ ಹುಬ್ಬಳ್ಳಿ, ಶಶಿಕುಮಾರ ಸುಳ್ಳದ, ಹಸನ್ ಇನಾಮದಾರ, ಕುಮಾರ ನೂಲ್ವಿ, ಶ್ರೀರಂಗ ಮುತಾಲಿಕ ದೇಸಾಯಿ, ಎ.ಬಿ ಬಿರಾದಾರ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.