ADVERTISEMENT

ವಿದ್ಯಾರ್ಥಿವೇತನ ಕಡಿತ; ಎಬಿವಿಪಿ ಆರೋಪ

​ಪ್ರಜಾವಾಣಿ ವಾರ್ತೆ
Published 10 ಮೇ 2025, 15:45 IST
Last Updated 10 ಮೇ 2025, 15:45 IST
ಧಾರವಾಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಸಿ.ಡಿ ಅವರಿಗೆ ಎಬಿವಿಪಿ ಕಾರ್ಯಕರ್ತರು ಮನವಿ ಪತ್ರ ಸಲ್ಲಿಸಿದರು
ಧಾರವಾಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಸಿ.ಡಿ ಅವರಿಗೆ ಎಬಿವಿಪಿ ಕಾರ್ಯಕರ್ತರು ಮನವಿ ಪತ್ರ ಸಲ್ಲಿಸಿದರು   

ಧಾರವಾಡ: ರಾಜ್ಯ ಸರ್ಕಾರವು ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ಕಡಿತಗೊಳಿಸಿದೆ ಎಂದು ಆರೋಪಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‍ನ ಜಿಲ್ಲಾ ಘಟಕದವರು ಶನಿವಾರ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಸಿ.ಡಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಕೃಷಿ ಪದವಿ ವಿದ್ಯಾರ್ಥಿಗಳಿಗೆ ₹15 ಸಾವಿರ ವಿದ್ಯಾರ್ಥಿ ವೇತನ ನೀಡಬೇಕು. ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ₹4 ಸಾವಿರ ವಿದ್ಯಾರ್ಥಿವೇತನ ಮಾತ್ರ ನೀಡಲಾಗುತ್ತಿದೆ ಎಂದು ಮನವಿ ಪತ್ರದಲ್ಲಿ ದೂರಿದ್ದಾರೆ.

ಹಿಂದಿನ ಶೈಕ್ಷಣಿಕ ಸಾಲಿನಲ್ಲಿ ನೀಡುತ್ತಿದ್ದಷ್ಟು ವಿದ್ಯಾರ್ಥಿ ವೇತನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.