ADVERTISEMENT

ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆಗೆ ಯತ್ನ; ಕಿಮ್ಸ್‌ಗೆ ದಾಖಲು, ಚೇತರಿಕೆ

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2022, 10:45 IST
Last Updated 29 ಏಪ್ರಿಲ್ 2022, 10:45 IST

ಹುಬ್ಬಳ್ಳಿ: ಹಳೇಹುಬ್ಬಳ್ಳಿ ಗಲಭೆಗೆ ಸಂಬಂಧಿಸಿ ಪೊಲೀಸ್ ಕಸ್ಟಡಿಯಲ್ಲಿ ವಿಚಾರಣೆಯಲ್ಲಿದ್ದ ಆರೋಪಿ ಮಹ್ಮದ್ ಆರೀಫ್ ನಾಗರಾಳ ಗುರುವಾರ ರಾತ್ರಿ 12 ರ ವೇಳೆ ಟರ್ಪಂಟೇಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಕರಣ ನಡೆದಿದೆ.

ಹಳೇಹುಬ್ಬಳ್ಳಿ ಪೊಲೀಸ್ ಕಸ್ಟಡಿಯಲ್ಲಿದ್ದ ಶಿಮ್ಲಾನಗರದ ಆರೀಫ್, ಅಲ್ಲಿದ್ದ ಸಿಬ್ಬಂದಿಗೆ ಟರ್ಪಂಟೇಲ್ ನೀಡುವಂತೆ ವಿನಂತಿಸಿದ್ದಾನೆ. ಗಾಯಕ್ಕೆ ಹಚ್ಚಲು ಕೇಳಿರಬಹುದು ಎಂದು ಸಿಬ್ಬಂದಿ ಅದರ ಬಾಟಲ್ ನೀಡಿದ್ದಾರೆ. ಅದನ್ನು ಪಡೆದ ಮಹ್ಮದ್ ಆರೀಫ್ ತಕ್ಷಣ ಕುಡಿದಿದ್ದಾನೆ. ಅಲ್ಲಿಯೇ ಇದ್ದ ಮತ್ತೊಬ್ಬ ಆರೋಪಿ ಎಐಎಂಐಎಂ ಮುಖಂಡ ನಸೀರ್'ಅಹ್ಮದ್ ಹೊನ್ಯಾಳ ಅದನ್ನು ನೋಡಿ, ಬಾಟಲಿ ಕೆಡವಿದ್ದಾನೆ. ಕೆಲ ಸಮಯದಲ್ಲಿಯೇ ಆರೀಫ್'ಗೆ ಪ್ರಜ್ಞೆ ತಪ್ಪಿದೆ.

ಮಹ್ಮದ್ ಆರೀಫ್ 'ನನ್ನು‌ ಕಿಮ್ಸ್'ನ ಎಂಐಸಿಯು ಘಟಕಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಚೇತರಿಸಿಕೊಂಡಿರುವ ಅವನನ್ನು ಶುಕ್ರವಾರ ಮಧ್ಯಾಹ್ನ‌ ಸಾಮಾನ್ಯ ವಾರ್ಡ್'ಗೆ ಸ್ಥಳಾಂತರಿಸಲಾಗಿದೆ. ಪ್ರಕರಣದ ದಿಕ್ಕು ತಪ್ಪಿಸಲು ಹೀಗೆ ನಾಟಕವಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.