ಧಾರವಾಡ: ಕಾಂಗ್ರೆಸ್ ಮುಖಂಡ ವಿನಯ ಕುಲಕರ್ಣಿ ಮನೆಗೆ ನಟ ದರ್ಶನ್ ಭೇಟಿ ನೀಡಿ ಕುಟುಂಬಕ್ಕೆ ಸಮಾಧಾನ ಹೇಳಿದರು.
ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲಿನಲ್ಲಿರುವ ವಿನಯ ಕುಲಕರ್ಣಿ ಹಾಗೂ ದರ್ಶನ್ ಒಳ್ಳೆಯ ಸ್ನೇಹಿತರಾಗಿದ್ದರು. ಕಳೆದಬಾರಿ ಇಲ್ಲಿಗೆ ಭೇಟಿ ನೀಡಿದ್ದಾಗ ವಿನಯ್ ಜೊತೆ ದರ್ಶನ್ ಚಕ್ಕಡಿ ಏರಿ ಸಂಭ್ರಮಿಸಿದ್ದರು.
ವಿನಯ ಕುಲಕರ್ಣಿ ಪತ್ನಿ ಶಿವಲೀಲಾ ಕುಲಕರ್ಣಿ, ಮಕ್ಕಳು ಹಾಗೂ ವಿನಯ್ ಅವರ ಅಕ್ಕ ಈ ಸಂದರ್ಭದಲ್ಲಿ ಇದ್ದರು.
ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಜೈಲಿನಲ್ಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.