ADVERTISEMENT

ಗಣೇಶ ಚೌತಿ: ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಪೊಲೀಸ್ ಪಥಸಂಚಲನ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2022, 12:58 IST
Last Updated 29 ಆಗಸ್ಟ್ 2022, 12:58 IST
   

ಹುಬ್ಬಳ್ಳಿ: ಗಣೇಶ ಚತುರ್ಥಿ ಅಂಗವಾಗಿ ಹುಧಾ ಪೊಲೀಸ್ ಕಮಿಷನರೇಟ್ ಘಟಕದ ಸಿಬ್ಬಂದಿ ಸೋಮವಾರ ನಗರದ ವಿವಿಧೆಡೆ ಪಥಸಂಚಲನ ನಡೆಸಿದರು.

ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ನಡೆದ ಪಥಸಂಚಲನ ಚನ್ನಮ್ಮ‌ ವೃತ್ತದಿಂದ ಆರಂಭವಾಗಿ, ಈದ್ಗಾ ಮೈದಾನ, ಲ್ಯಾಮಿಂಗ್ಟನ್ ರಸ್ತೆ, ಕೊಪ್ಪಿಕರ್ ರಸ್ತೆ, ದುರ್ಗದ ಬೈಲ್, ಸಿಬಿಟಿ, ಗಣೇಶಪೇಟೆ ಮುಖಾಂತರ ಸಾಗಿತು.

ಕ್ಷಿಪ್ರ ಕಾರ್ಯಾಚರಣೆ ಪಡೆ, ಸಶಸ್ತ್ರ ಮೀಸಲು ಪಡೆ ಸಿಬ್ಬಂದಿ ಇದ್ದರು. ಕಮಿಷನರ್ ಲಾಭೂರಾಮ್, ಡಿಸಿಪಿಗಳಾದ ಸಾಹಿಲ್ ಬಾಗ್ಲಾ, ಗೋಪಾಲ ಬ್ಯಾಕೋಡ್ ಹಾಗೂ ಎಸಿಪಿ, ಇನ್ಸ್‌ಪೆಕ್ಟರ್‌ಗಳು ಪಾಲ್ಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.