ADVERTISEMENT

ಎಐಸಿಸಿ ವಕ್ತಾರ ಸಂಕೇತ ಏಣಗಿ ರಾಜೀನಾಮೆ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2024, 21:17 IST
Last Updated 17 ಮಾರ್ಚ್ 2024, 21:17 IST

ಧಾರವಾಡ: ಎಐಸಿಸಿ ವಕ್ತಾರ ಸಂಕೇತ ಎಂ. ಏಣಗಿ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ರವಾನಿಸಿದ್ದಾರೆ.

‘ಪಕ್ಷದ ಗೆಲುವಿಗೆ ಕಾರಣರಾದ ಕಾರ್ಯಕರ್ತರನ್ನು ಕಡೆಗಣಿಸಲಾಗಿದೆ. ಪಕ್ಷ ಅಧಿಕಾರಕ್ಕೆ ಏರಿದ ನಂತರ ನನ್ನಂಥ ಸಹಸ್ರಾರು ಕಾರ್ಯಕರ್ತರನ್ನು ಪರಿಗಣಿಸದಿರುವುದು ನೋವುಂಟು ಮಾಡಿದೆ. ವೀರಶೈವ ಲಿಂಗಾಯತನಾಗಿದ್ದಕ್ಕೆ ನನ್ನನ್ನು ಬಲಿಪಶು ಮಾಡಲಾಗಿದೆ. ನಾಯಕರ ನಡೆಯಿಂದ ಬೇಸತ್ತು ರಾಜೀನಾಮೆ ನೀಡಿದ್ದೇನೆ’ ಎಂದು ಅವರು ಪತ್ರದಲ್ಲಿ
ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT