ಕುಂದಗೋಳ: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ರೈತರ ಜಮೀನುಗಳಿಗೆ ವ್ಯವಸಾಯಕ್ಕೆ ಸರಿಯಾದ ರಸ್ತೆ ಇರುವುದಿಲ್ಲ ಹೊಲದ ರಸ್ತೆಗಳನ್ನು ಅಭಿವೃದ್ಧಿ ಪಡಿಸಬೇಕು ಎಂದು ತಾಲ್ಲೂಕಿನ ರೈತರು ಬೆಂಗಳೂರಿನಲ್ಲಿ ಕೃಷಿ ಸಚಿವ ಎಸ್.ಚೆಲುವರಾಯ ಸ್ವಾಮಿ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
ಮನವಿಯಲ್ಲಿ ರಸ್ತೆ ದುರಸ್ತಿ ಜೊತೆಗೆ, ಡಿ.ಎ.ಪಿ ಗೊಬ್ಬರ ಜೊತೆ ಬೇರೆ ಗೊಬ್ಬರ ಕಡ್ಡಾಯವಾಗಿ ಖರೀದಿ ಮಾಡುವಂತೆ ಹೇಳುತ್ತಿದ್ದು, ಕಟ್ಟುನಿಟ್ಟಿನ ಆದೇಶ ಮಾಡುವಂತೆ ಮನವಿಯಲ್ಲಿ ಕೊರಿದ್ದಾರೆ.
ಈ ಸಂದರ್ಭದಲ್ಲಿ ರೈತ ಮುಂಖಡರಾದ ಬಸವರಾಜ ಯೋಗಪ್ಪನವರ. ವಿಠ್ಠಲ ಘಾಟಗೆ, ಚನ್ನಬಸಪ್ಪ ಸಿದ್ದುನವರ, ರಾಘವೇಂದ್ರ ಇಂಗಳಗಿ, ಶಿವಾನಂದ ಮಸನಾಳ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.