ಹುಬ್ಬಳ್ಳಿ: ಆರ್ಎಸ್ಎಸ್ ಕಚೇರಿಯಲ್ಲಿ ಪ್ರತಿನಿತ್ಯ ನಡೆಯುವ ಪ್ರಾತಃ ಸ್ಮರಣೆಯಲ್ಲಿ ಬಸವಣ್ಣನ ಹೆಸರು ಉಲ್ಲೇಖವಾಗುತ್ತದೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.
‘ಆರ್ಎಸ್ಎಸ್ ಕಚೇರಿಯಲ್ಲಿ ಬಸವಣ್ಣನ ಫೋಟೊ ಹಾಕಿ’ ಎಂಬ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಲಕರ್ಣಿಗೆ ಹೇಳಿಕೆಗೆ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿರುಗೇಟು ನೀಡಿದ ಅವರು, ಚಂದ್ರಗುಪ್ತ ಮೌರ್ಯನಿಂದ ಹಿಡಿದು ಅಂಬೇಡ್ಕರ್ ವರೆಗೂ ನಾಡಿನ ಮಹನೀಯರನ್ನು ಸ್ಮರಣೆ ಮಾಡಲಾಗುತ್ತದೆ. ಇದರಲ್ಲಿ ಬಸವಣ್ಣನ ಹೆಸರೂ ಇದೆ ಎಂದರು.
ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ಮಾತನಾಡಿ, ‘ಎಲ್ಲ ಆರ್ಎಸ್ಎಸ್ ಕಚೇರಿಯಲ್ಲೂ ಬಸವಣ್ಣನ ಫೋಟೊ ಅಳವಡಿಸಲಾಗಿದೆ. ಸ್ವತ ನಾನೇ ನೋಡಿದ್ದೇನೆ’ ಎಂದು ಸಮಜಾಯಿಷಿ ನೀಡಿದರು.
ಶಾಸಕ ಅಮೃತ ದೇಸಾಯಿ, ಆರ್ಎಸ್ಎಸ್ ಬಗ್ಗೆ ಅರಿವಿಲ್ಲದ ವಿನಯ ಕುಲಕರ್ಣಿ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಒಮ್ಮೆ ಆರ್ಎಸ್ಎಸ್ ಕಚೇರಿಗೆ ಭೇಟಿ ಸಂಘದ ಅಜೆಂಡಾದ ಬಗ್ಗೆ ತಿಳಿದುಕೊಳ್ಳಿ ಎಂದು ಸಲಹೆ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.