ಹುಬ್ಬಳ್ಳಿ: ‘ರಾಜ್ಯದಲ್ಲಿ ಆಲ್ ಇಂಡಿಯಾ ಮಜ್ಲೀಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಪಕ್ಷದ ಅಸಾದುದ್ದೀನ್ ಒವೈಸಿ ಆಟ ನಡೆಯುವುದಿಲ್ಲ. ಅವರ ಪಕ್ಷ ಬಿಜೆಪಿಯ ಬಿ ಟೀಮ್’ ಎಂದು ಶಾಸಕ ಬಿ.ಝಡ್. ಜಮಿರ್ ಅಹ್ಮದ್ ಖಾನ್ ಹೇಳಿದರು.
ಹುಬ್ಬಳ್ಳಿಯ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಮಾತನಾಡಿದ ಅವರು, ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ. ಅದರಲ್ಲಿ ಯಾವುದೇ ಸಂಶಯ ಬೇಡ’ ಎಂದರು.
ಪಕ್ಷದ ಸ್ಥಳೀಯ ನಾಯಕರು ಹಾಗೂ ವಿವಿಧ ಸಂಘಟನೆಗಳ ಪ್ರಮುಖರು ಜಮೀರ್ ಅವರನ್ನು ಸನ್ಮಾನಿಸಿದರು. ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫಹುಸೇನ ಹಳ್ಳೂರ, ಗ್ರಾಮೀಣ ಜಿಲ್ಲಾಧ್ಯಕ್ಷ ಅನಿಲಕುಮಾರ ಪಾಟೀಲ, ಮುಖಂಡರಾದ ಇಸ್ಮಾಯಿಲ್ ತಮಟಗಾರ, ಶರಣಪ್ಪ ಕೊಟಗಿ, ದೀಪಾ ನಾಗರಾಜ್ ಗೌರಿ, ಅಲ್ತಾಫನವಾಜ್ ಕಿತ್ತೂರ, ಮೋಹನ ಹಿರೇಮನಿ, ದಶರಥ ವಾಲಿ, ಅಬ್ದುಲ್ ಗನಿ ವಲಿಅಹ್ಮದ, ಇಮ್ರಾನ್ ಎಲಿಗಾರ, ತಾರಾದೇವಿ ವಾಲಿ, ನವೀದ್ ಮುಲ್ಲಾ, ಮುತ್ತಣ್ಣ ಶಿವಳ್ಳಿ, ಪ್ರಕಾಶ ಹಳಿಯಾಳ, ಜಯಲಕ್ಷ್ಮಿ ದೊಡ್ಡಮನಿ ಮುಂತಾದವರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.