ಹುಬ್ಬಳ್ಳಿ: ಕೋವಿಡ್ ಲಾಕ್ಡೌನ್ ಇರುವ ಕಾರಣ ಅನಗತ್ಯವಾಗಿ ಓಡಾಡುವವರ ಮೇಲೆ ನಿಗಾ ವಹಿಸಲು ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ಮಾಡಿದ್ದು, ಆತನನ್ನು ಬಂಧಿಸಲಾಗಿದೆ.
ಶನಿವಾರ ಬೆಳಿಗ್ಗೆ ಎಂಟು ಗಂಟೆ ಸುಮಾರಿಗೆ ಉಪನಗರ ಪೊಲೀಸ್ ಠಾಣೆ ಸಿಬ್ಬಂದಿ ಶ್ರೀಶೈಲ್ ನರಗುಂದ ಹೊಸೂರು ಚೆಕ್ ಪೋಸ್ಟ್ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆ ವೇಳೆ ಮಾಸ್ಕ್ ಧರಿಸದೆ ಕಾರು ಚಲಾಯಿಸಿಕೊಂಡು ಬಂದಉತ್ತರ ಪ್ರದೇಶದ ಗೋರಖಪುರದ ಪ್ರಕಾಶ ಸಿಂಗ್ ಎಂಬಾತನನ್ನು ಪ್ರಯಾಣದ ಪರವಾನಗಿ ಬಗ್ಗೆ ವಿಚಾರಿಸಿದಾಗ; ಪ್ರಕಾಶ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದಾನೆ. ತಕ್ಷಣವೇ ಸ್ಥಳಕ್ಕೆ ಹೆಚ್ಚಿನ ಸಿಬ್ಬಂದಿ ಬಂದು ಆರೋಪಿಯನ್ನು ಕಾರು ಸಮೇತ ಬಂಧಿಸಿದ್ದಾರೆ.
ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.