ಹುಬ್ಬಳ್ಳಿ: ಇಲ್ಲಿನ ಮಂಟೂರು ನಿವಾಸಿ ಲೀನಾ ಸಲಕನಟಿ ಎಂಬುವರ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಪೊಲೀಸರು ಕೊಲೆ ಯತ್ನ ಪ್ರಕರಣ ದಾಖಲಿಸಿಲ್ಲ ಎಂದು ಭ್ರಷ್ಟಾಚಾರ ನಿರ್ಮೂಲನೆ ಮತ್ತು ಮಾನವ ಹಕ್ಕುಗಳ ರಕ್ಷಣಾ ಫೋರಂ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಜಯಲಕ್ಷ್ಮಿ ಧಾರವಾಡಕರ ಆರೋಪಿಸಿದರು.
ಅಂಗವಿಕಲರಾದ ರಮಾ ಎಂಬುವರನ್ನು ಲೀನಾ ಕೆಲಸಕ್ಕೆ ಸೇರಿಸಿದ್ದರು ಹಾಗೂ ಆಕೆಗೆ ಸಹಾಯ ಮಾಡುತ್ತಿದ್ದರು. ಇದೇ ಕಾರಣಕ್ಕೆ ಆಕೆಯ ಅಣ್ಣ ರಾಜೇಂದ್ರ ಎಂಬಾತ ಸಹಚರರರೊಂದಿಗೆ ಸೇರಿಕೊಂಡು ಲೀನಾ ಅವರ ಮೇಲೆ ಹಲ್ಲೆ ನಡೆಸಿದ್ದ. ಆಕೆಯ ಎರಡೂ ಮೂತ್ರಪಿಂಡಗಳು ವಿಫಲವಾಗಿದ್ದು, ಈಗಲೂ ಆಸ್ಪತ್ರೆಯಲ್ಲಿದ್ದಾರೆ ಎಂದರು.
ಈ ಆರೋಪವನ್ನು ಪೊಲೀಸರು ನಿರಾಕರಿಸಿದ್ದಾರೆ. ದೂರು ದಾಖಲಾದ ತಕ್ಷಣ ರಾಜೇಂದ್ರ ಮತ್ತು ಡೇವಿಡ್ ಎಂಬುವರನ್ನು ಬಂಧಿಸಲಾಗಿದೆ. ತನಿಖೆ ಮುಂದುವರೆದಿದ್ದು, ಉಳಿದ ಆರೋಪಿಗಳನ್ನು ಸಹ ಬಂಧಿಸಲಾಗುವುದು. ಮೂತ್ರಪಿಂಡ ವಿಫಲವಾಗಿರುವ ಬಗ್ಗೆ ವೈದ್ಯರು ವರದಿ ನೀಡಿದರೆ, ಕೊಲೆ ಯತ್ನ ಸೆಕ್ಷನ್ ಸೇರಿಸುವ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ಕೇಶ್ವಾಪುರ ಠಾಣೆ ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.