ADVERTISEMENT

ಆಟೊ ಚಾಲಕರಿಗೆ ಪರಿಹಾರ ನೀಡಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2020, 15:08 IST
Last Updated 21 ಸೆಪ್ಟೆಂಬರ್ 2020, 15:08 IST
ಆಟೊ ಓಡಿಸುವ ಎಲ್ಲ ಚಾಲಕರಿಗೆ ಪರಿಹಾರ ಧನ ನೀಡಬೇಕು ಎಂದು ಆಗ್ರಹಿಸಿ ಸೋಮವಾರ ಆಟೊ ಚಾಲಕರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಆಟೊ ಓಡಿಸುವ ಎಲ್ಲ ಚಾಲಕರಿಗೆ ಪರಿಹಾರ ಧನ ನೀಡಬೇಕು ಎಂದು ಆಗ್ರಹಿಸಿ ಸೋಮವಾರ ಆಟೊ ಚಾಲಕರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.   

ಹುಬ್ಬಳ್ಳಿ: ರಾಜ್ಯ ಸರ್ಕಾರ ಕೋವಿಡ್‌–19 ಹಿನ್ನೆಲೆಯಲ್ಲಿ ನೀಡುತ್ತಿರುವ ₹5,000 ಪರಿಹಾರ ಎಲ್ಲ ಚಾಲಕರಿಗೂ ದೊರೆಯುವಂತಾಗಬೇಕು ಎಂದು ಆಗ್ರಹಿಸಿ ಹುಬ್ಬಳ್ಳಿ ಆಟೊ ರಿಕ್ಷಾ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಸೋಮವಾರ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.

ಸ್ವಂತ ರಿಕ್ಷಾ ಇಲ್ಲದೆ, ಬೇರೆಯವರ ಆಟೊದಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದ ಎಲ್ಲರಿಗೂ ದೊರೆಯುವಂತಾಗಬೇಕು ಎಂದು ಆಗ್ರಹಿಸಿದರು.

ಬ್ಯಾಂಕ್‌, ಖಾಸಗಿ ಫೈನಾನ್ಸ್‌ಗಳಲ್ಲಿ ಸಾಲ ಪಡೆದು ಆಟೊರಿಕ್ಷಾಗಳನ್ನು ಪಡೆದವರು ಕಂತು ಪಾವತಿಸದಂತಹ ಸ್ಥಿತಿಗೆ ತಲುಪಿದ್ದಾರೆ. ಆದ್ದರಿಂದ ಸಾಲಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.

ADVERTISEMENT

ಪೆಟ್ರೋಲ್‌ ಬೆಲೆ ಹೆಚ್ಚಳ ತೀವ್ರವಾಗಿರುವುದರಿಂದ ಆಟೊ ಓಡಿಸುವುದು ಕಷ್ಟವಾಗಿದೆ. ಪರಿಹಾರ ಧನಕ್ಕಾಗಿ ಅರ್ಜಿ ಹಾಕುವಾಗ ಆಟೊರಿಕ್ಷಾ ಆರ್‌ಸಿ ಬುಕ್‌, ಚೆಸ್ಸಿ ನಂಬರ್‌ ಕೇಳುತ್ತಿದ್ದಾರೆ. ಬಾಡಿಗೆ ವಾಹನ ಓಡಿಸುವವರಿಗೆ ಇದರಿಂದ ಸೌಲಭ್ಯ ದೊರೆಯುತ್ತಿಲ್ಲ ಎಂದು ದೂರಿದರು.

ಚಾಲನಾ ಲೈಸನ್ಸ್‌ ಹಾಗೂ ಬ್ಯಾಡ್ಜ್‌ ಹೊಂದಿದ ಎಲ್ಲ ಚಾಲಕರಿಗೂ ಪರಿಹಾರ ಧನ ನೀಡಬೇಕು ಎಂದು ಒತ್ತಾಯಿಸಿದರು. ಅಧ್ಯಕ್ಷ ಶೇಖರಯ್ಯ ಮಠಪತಿ, ಲೋಕೇಶ ಚಿಕ್ಕಮಂಗಳೂರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.