ADVERTISEMENT

ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ: ಹುಬ್ಬಳ್ಳಿಯ ಕೇಶವಕುಂಜದಲ್ಲಿ ಸಡಗರ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2020, 9:17 IST
Last Updated 5 ಆಗಸ್ಟ್ 2020, 9:17 IST
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ಅಂಗವಾಗಿ ನಗರದ ಆರ್‌ಎಸ್ಎಸ್ ಕಚೇರಿ ಕೇಶವಕುಂಜದಲ್ಲಿ ವಿಶೇಷ ಪೂಜೆ ನಡೆಯಿತು.
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ಅಂಗವಾಗಿ ನಗರದ ಆರ್‌ಎಸ್ಎಸ್ ಕಚೇರಿ ಕೇಶವಕುಂಜದಲ್ಲಿ ವಿಶೇಷ ಪೂಜೆ ನಡೆಯಿತು.   
""
""
""
""

ಹುಬ್ಬಳ್ಳಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲು ಮುಹೂರ್ತ ಸಮೀಪಿಸುತ್ತಿದ್ದಂತೆ ನಗರದ ಆರ್ ಎಸ್ಎಸ್ ಕಚೇರಿ ಕೇಶವಕುಂಜದಲ್ಲಿ ಸಡಗರದ ವಾತಾವರಣ ‌ನಿರ್ಮಾಣವಾಗಿತ್ತು.

ಈ ಐತಿಹಾಸಿಕ ಕ್ಷಣವನ್ನು ಸ್ಮರಣೀಯವಾಗಿರಿಸಲು ದಿನಪೂರ್ತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಮಂಗಳವಾರ ರಾತ್ರಿಯೇ ಕೇಶವ ಕುಂಜವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಬೆಳಿಗ್ಗೆಯಿಂದಲೆ ರಾಮ ನಾಮ ಪಠಣ, ಭಜನೆಗಳು ನಡೆಯುತ್ತಿವೆ. ಸಂಜೆ ಆರು ಗಂಟೆಗೆ ದೀಪೋತ್ಸವ ಜರುಗಲಿದೆ.

ಬಾಳೆದಿಂಡು, ಭಗವಾಧ್ವಜ, ಬಣ್ಣಬಣ್ಣದ ಹಾಳೆಗಳಿಂದ ಕಚೇರಿಯನ್ನು ಅಲಂಕರಿಸಲಾಗಿದೆ‌. ಬೆಳಿಗ್ಗೆ ಎಂಟು ಗಂಟೆಯಿಂದ ಕಾರ್ಯಕ್ರಮ ಆರಂಭವಾಗಿದ್ದು, ಕೊರೊನಾ ಸೋಂಕಿನ ಭೀತಿ ಇರುವ ಕಾರಣ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಕಚೇರಿಯ ಸಿಬ್ಬಂದಿ ಹಾಗೂ ಕೆಲ ಆರ್ ಎಸ್ಎಸ್ ಪ್ರಮುಖರಷ್ಟೇ ಪಾಲ್ಗೊಂಡಿದ್ದಾರೆ.

ADVERTISEMENT

ಸಂಘದ ಹಿರಿಯ ಪ್ರಚಾರಕ ಸು. ರಾಮಣ್ಣ, ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ ಮಂಗೇಶ ಭೇಂಡೆ ಭಾಗವಹಿಸಿದ್ದಾರೆ‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.