ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ಹುಬ್ಬಳ್ಳಿಯ ತೋಳನಕೆರೆಯಿಂದ ಆಯೋಜಿಸಿರುವ ‘ತಿರಂಗಾ ನಡಿಗೆ’ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಅವರು ಗುರುವಾರ ಚಾಲನೆ ನೀಡಿದರು.
ನಡಿಗೆಯಲ್ಲಿ ಮಕ್ಕಳ ಸ್ಕೇಟಿಂಗ್, ಡೊಳ್ಳು ಕುಣಿತ ಗಮನ ಸೆಳೆದವು. ಗೋಕುಲ ರಸ್ತೆಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕಚೇರಿ ಬಳಿ ಗೋಡೆಯ ಮೇಲೆ ದೇಶ ಪ್ರೇಮ ಸಾರುವ ಚಿತ್ರಗಳನ್ನು ಬಿಡಿಸಿದರು.
ಮೇಯರ್ ಈರೇಶ ಅಂಚಟಗೇರಿ, ಉಪಮೇಯರ್ ಉಮಾ ಮುಕುಂದ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಪಾಲಿಕೆ ಆಯುಕ್ತ ಡಾ. ಗೋಪಾಲಕೃಷ್ಣ ಬಿ., ಜಿಲ್ಲಾ ಪಂಚಾಯಿತಿ ಸಿಇಒ ಡಾ.ಸುರೇಶ ಇಟ್ನಾಳ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್, ಪಾಲಿಕೆ ಸದಸ್ಯರಾದ ರೂಪಾಶೆಟ್ಟಿ, ಕಿಶನ್ ಬೆಳಗಾವಿ, ರಾಜಣ್ಣ ಕೊರವಿ, ಉಮೇಶ ಕೌಜಗೇರಿ ಸೇರಿದಂತೆ ನಗರದ ಚೇತನಾ ಕಾಲೇಜಿನ ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.