ಹುಬ್ಬಳ್ಳಿ: ಸೋಲಿಲ್ಲದ ಸರದಾರ ಎಂಬ ಪಟ್ಟ ಮುಂದುವರಿಯತ್ತದೆ.ಪ್ರತಿಪಕ್ಷಗಳು ಏನೇ ಅಪಪ್ರಚಾರ ಮಾಡಿದರೂ ಅದರ ಪರಿಣಾಮ ಆಗುವುದಿಲ್ಲ. ನನ್ನ ಗೆಲುವು ನಿಶ್ಚಿತ. ಶೇಕಡಾ 70ರಷ್ಟು ಮತ ಪಡೆದು ಗೆಲ್ಲುತ್ತೇನೆ. ವಿರೋಧಿಗಳು ಚುನಾವಣೆ ಸಂದರ್ಭದಲ್ಲಿ ಆರೋಪ ಮಾಡುವುದು ಸಹಜ ಎಂದು ವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಹೇಳಿದರು.
ಇಲ್ಲಿನ ದೇಶಪಾಂಡೆ ನಗರದ ರೋಟರಿ ಶಾಲೆಯ ಮತಗಟ್ಟೆಗೆ ಸೋಮವಾರ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 42 ವರ್ಷಗಳಿಂದ ಈ ಕ್ಷೇತ್ರ ಪ್ರತಿನಿಧಿಸುತ್ತಿದ್ದೇನೆ. ಯಾವುದೇ ಕಪ್ಪು ಚುಕ್ಕೆ ಇಲ್ಲದೇ ಅಧಿಕಾರ ನಡೆಸಿದ್ದೇನೆ.ಈ ಸಲವು ಗೆಲುವು ಖಚಿತ. ವಿರೋಧಿಗಳು ಮಾಡಿರುವ ಆರೋಪ ಸಾಬೀತಾದರೆ ರಾಜಕೀಯದಿಂದ ದೂರ ಉಳಿಯುತ್ತೇನೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.