ADVERTISEMENT

ರಾಮಮಂದಿರಕ್ಕೆ ಭೂಮಿಪೂಜೆ: ಸಡಗರಕ್ಕೆ ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2020, 16:26 IST
Last Updated 4 ಆಗಸ್ಟ್ 2020, 16:26 IST
ಹುಬ್ಬಳ್ಳಿಯ ಆರ್‌ಎಸ್‌ಎಸ್ ಕಚೇರಿ ಕೇಶವಕುಂಜಕ್ಕೆ ಮಂಗಳವಾರ ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿತ್ತು
ಹುಬ್ಬಳ್ಳಿಯ ಆರ್‌ಎಸ್‌ಎಸ್ ಕಚೇರಿ ಕೇಶವಕುಂಜಕ್ಕೆ ಮಂಗಳವಾರ ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿತ್ತು   

ಹುಬ್ಬಳ್ಳಿ: ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಬುಧವಾರ ಭೂಮಿಪೂಜೆ ಆಯೋಜನೆಯಾಗಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಸಿದ್ಧತಾ ಕಾರ್ಯ ಜೋರಾಗಿ ನಡೆದಿವೆ.

ಆರ್‌ಎಸ್‌ಎಸ್‌ ಕಚೇರಿ ಕೇಶವಕುಂಜದಲ್ಲಿ ಭೂಮಿಪೂಜೆಯ ಸಂಭ್ರಮ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಂಗಳವಾರವೇ ಕಚೇರಿಯನ್ನು ಬಣ್ಣಬಣ್ಣದ ವಿದ್ಯುತ್‌ ದೀಪಗಳಿಂದ ಅಲಂಕರಿಸಿ ಬಾಳೆದಿಂಡು, ಬಣ್ಣಬಣ್ಣದ ಹಾಳೆಗಳಿಂದ ಶೃಂಗಾರಗೊಳಿಸಲಾಗಿದೆ. ರಾಮ, ಲಕ್ಷ್ಮಣ ಹಾಗೂ ಸೀತೆಯರ ಚಿತ್ರಗಳನ್ನು ರಂಗೋಲಿಯಲ್ಲಿ ಬಿಡಿಸಿ ಅಲಂಕಾರ ಮಾಡಲಾಗಿದೆ.

ಕೇಶವಕುಂಜದಲ್ಲಿ ಬೆಳಿಗ್ಗೆ ಎಂಟು ಗಂಟೆಯಿಂದ ರಾಮನ ಭಜನೆಗಳು ಹಾಗೂ ಪೂಜೆ ನಡೆಯಲಿದ್ದು, ಸಂಜೆ 6 ಗಂಟೆಗೆ ದೀಪೋತ್ಸವ ಜರುಗಲಿದೆ. ಸಂಘದ ಹಿರಿಯ ಪ್ರಚಾರಕ ಸು.ರಾಮಣ್ಣ, ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ ಮಂಗೇಶ ಭೇಂಡೆ ಸೇರಿದಂತೆ ಸಂಘದ ಇತರ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.

ADVERTISEMENT

ನಗರದ ಯುವಕ ಮಂಜುನಾಥ ಹೆಬಸೂರ ಹಾಗೂ ಗೆಳೆಯರು ಸೇರಿ ಥರ್ಮಾಕೋಲ್‌ನಲ್ಲಿ ಶ್ರೀರಾಮ ಮಂದಿರದ ಮಾದರಿ ಸಿದ್ಧಪಡಿಸಿದ್ದಾರೆ. ಬಾನಿ ಓಣಿಯಲ್ಲಿ ಹಿಂದೂಪರ ಸಂಘಟನೆಗಳ ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರು ವಿವಿಧ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿ, ಸಿಹಿ ಹಂಚಲು ಸಿದ್ಧತೆ ಮಾಡಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.