ಹುಬ್ಬಳ್ಳಿ: ಲಂಬಾಣಿ ತಾಂಡಾಗಳನ್ನು ಕಂದಾಯ ಗ್ರಾಮ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುಕ್ಕಟ್ಟೆ ಪ್ರಚಾರ ಪಡೆಯುತ್ತಿದ್ದಾರೆ. ಆದರೆ, ಇದನ್ನು ಸಾಕಾರ ಮಾಡಿದ್ದು ಕಾಂಗ್ರೆಸ್. ಬಿಜೆಪಿಯವರು ಕಾಂಗ್ರೆಸ್ ಮಾಡಿದ ಕೆಲಸವನ್ನು ತಾವು ಮಾಡಿದ್ದೇವೆ ಎಂದು ಪ್ರಚಾರ ಪಡೆಯುತ್ತಿದ್ದಾರೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕರಾದ ಪ್ರಕಾಶ ರಾಠೋಡ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಹುಬ್ಬಳ್ಳಿಯಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗಲೇ ಲಂಬಾಣಿ ಸಮುದಾಯಕ್ಕೆ ಬಹುದೊಡ್ಡ ಕೊಡುಗೆ ಕೊಟ್ಟಿದ್ದಾರೆ. ಅಲ್ಲದೇ ಪರಿಶಿಷ್ಟ ಜಾತಿಗೆ ವಿಶೇಷ ಕೊಡುಗೆ ನೀಡಿರುವುದು ನಿಜಕ್ಕೂ ಕಾಂಗ್ರೆಸ್ ಪಕ್ಷದ ಕೀರ್ತಿಯನ್ನು ಹೆಚ್ಚಿಸುತ್ತದೆ ಎಂದರು.
ಸಿದ್ಧರಾಮಯ್ಯನವರ ಮುಖ್ಯಮಂತ್ರಿ ಇದ್ದಾಗ ಸರ್ಕಾರದ ಪರವಾಗಿ ಸೇವಾಲಲ ಜಯಂತಿ ಮಾಡುವಂತ ವ್ಯವಸ್ಥೆ ಜಾರಿಗೊಳಿಸಿರುವುದು ನಿಜಕ್ಕೂ ಶ್ಲಾಘನೀಯ. ಬಿಜೆಪಿ ಮಯಾವುದೇ ಕೊಡುಗೆ ನೀಡದೇ ಬಿಟ್ಟಿ ಪ್ರಚಾರ ಪಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.