ಹುಬ್ಬಳ್ಳಿ: ‘ಬೆಂಗಳೂರಿನ ಅರಮನೆ ಮೈದಾನದಲ್ಲಿ ಡಿ. 18ರಂದು ರಾಜ್ಯದ 24 ಪ್ರಕೋಷ್ಠಗಳ ಸಮಾವೇಶ ನಡೆಯಲಿದೆ. 2023ರ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಸಮಾವೇಶ ಆಯೋಜಿಸಲಾಗಿದೆ’ ಎಂದು ಬಿಜೆಪಿ ರಾಜ್ಯ ಪ್ರಕೋಷ್ಠಗಳ ಸಹ ಸಂಯೋಜಕ ಜಯತೀರ್ಥ ಕಟ್ಟಿ ಹೇಳಿದರು.
ದೇಶಪಾಂಡೆ ನಗರದ ಬಿಜೆಪಿ ಕಾರ್ಯಾಲಯದಲ್ಲಿ ಶುಕ್ರವಾರ ನಡೆದ ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಂಚಾಲಕ ಮತ್ತು ಸಹ ಸಂಚಾಲಕರ ಸಭೆಯಲ್ಲಿ ಮಾತನಾಡಿ, ‘ವಿವಿಧ ಹಂತಗಳಲ್ಲಿ ಜವಾಬ್ದಾರಿ ನಿಭಾಯಿಸುತ್ತಿರುವ ಕಾರ್ಯಕರ್ತರ ಸಮಾವೇಶ ಇದಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರು, ಬಿಜೆಪಿ ಶಾಸಕರು ಹಾಗೂ ರಾಜ್ಯ ಪ್ರಕೋಷ್ಠಗಳ ಸಂಯೋಜಕ ಎಂ.ಬಿ. ಬಾನುಪ್ರಕಾಶ ನೇತೃತ್ವದಲ್ಲಿ ಸಮಾವೇಶ ನಡೆಯಲಿದೆ’ ಎಂದು ತಿಳಿಸಿದರು.
ಪಕ್ಷದ ಮಹಾನಗರ ಘಟಕದ ಅಧ್ಯಕ್ಷ ಸಂಜಯ ಕಪಟಕರ ಮಾತನಾಡಿದರು. ಪಾಲಿಕೆ ಸದಸ್ಯ ರಾಮಣ್ಣ ಬಡಿಗೇರ, ಮುಖಂಡರಾದ ವೀರೇಶ ಸಂಗಳದ, ಡಾ. ಮಹೇಶ ನಾಲವಾಡ, ರಂಗಾ ಬದ್ದಿ, ಚಂದ್ರಶೇಖರ ಗೋಕಾಕ, ಶ್ರೀನಿವಾಸ ಶಾಸ್ತ್ರಿ, ಡಾ. ವಿವೇಕ ಪಾಟೀಲ, ರವಿ ನಾಯಕ, ಕಿರಣ ಹೆಬಸೂರ, ಬೀರಪ್ಪ ಖಂಡೇಕರ, ಪ್ರಶಾಂತ ಹಾವಣಗಿ, ಮಾಲತೇಶ ಬತ್ಲಿ, ಮುದಕೇಶ ಮಾದರ, ಅಂದಾನಪ್ಪ ಸಂಕನೂರ, ಬಲಭೀಮ ಪೋದಾರ, ಎಚ್.ಎಸ್.ಕಿರಣ, ಎಂ. ಲೋಕೇಶ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.