ಹುಬ್ಬಳ್ಳಿ: ನಗರದಲ್ಲಿ ಡಿ.28 ಮತ್ತು 29ರಂದು ನಡೆಯಲಿರುವ ಬಿಜೆಪಿ ರಾಜ್ಯಮಟ್ಟದ ಕಾರ್ಯಕಾರಿಣಿಯ ಲಾಂಛನವನ್ನು ಜಿಲ್ಲಾ ಉಸ್ತುವಾರಿ ಸಚಿವ ಶಂಕರಪಾಟೀಲ ಮುನೇನಕೊಪ್ಪ ಭಾನುವಾರ ಬಿಡುಗಡೆ ಮಾಡಿದರು.
ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕಾರಿಣಿಯಲ್ಲಿ ರಾಜ್ಯ ಮತ್ತು ದೇಶಕ್ಕೆ ಸಂಬಂಧಿಸಿದ ಎರಡು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದರು.
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಪಕ್ಷದ ರಾಜ್ಯ ಮಟ್ಟದ ಪದಾಧಿಕಾರಿಗಳು, ಸಚಿವರು ಹಾಗೂ ಶಾಸಕರು ಕಾರ್ಯಕಾರಿಣಿಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ, ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಜಿಲ್ಲಾ ವಕ್ತಾರ ರವಿ ನಾಯಕ ಹಾಗೂ ಪ್ರಧಾನ ಕಾರ್ಯದರ್ಶಿ ದತ್ತಮೂರ್ತಿ ಕುಲಕರ್ಣಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.