ADVERTISEMENT

ಬಸ್‌ ಚಕ್ರಕ್ಕೆ ಸಿಲುಕಿ ಸಾವು

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2019, 5:44 IST
Last Updated 18 ಆಗಸ್ಟ್ 2019, 5:44 IST

ಹುಬ್ಬಳ್ಳಿ: ಇಲ್ಲಿನ ಹಳೇ ಬಸ್‌ ನಿಲ್ದಾಣದಲ್ಲಿ ಶನಿವಾರ ಮಧ್ಯಾಹ್ನ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕಿನ ಗಳಗ ಗ್ರಾಮದ ನಿವಾಸಿ ಹುಸೇನಸಾಬ್‌ ಅಬ್ದುಲ್‌ ಕರ್ನೂಲ್‌(28) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಹುಬ್ಬಳ್ಳಿಗೆ ಬಂದಿದ್ದ ಅವರು, ಚಿಕಿತ್ಸೆ ಪಡೆದು ಮರಳಿ ತಂದೆ ಮತ್ತು ಅಳಿಯನೊಂದಿಗೆ ಊರಿಗೆ ತೆರಳಲು ಹಳೆ ಬಸ್‌ ನಿಲ್ದಾಣಕ್ಕೆ ಬಂದಿದ್ದರು. ಮೂತ್ರವಿಸರ್ಜನೆಗೆಂದು ಹೋಗುತ್ತಿದ್ದಾಗ ಬಸ್‌ನ ಹಿಂಭಾಗದ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.