ಹುಬ್ಬಳ್ಳಿ: ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಮಂಗಳವಾರ ಬೆಳಿಗ್ಗೆ 6 ಗಂಟೆಯಿಂದಲೇ ನಗರದಲ್ಲಿ ನಡೆದಿರುವ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಕಳೆದ ವರ್ಷ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಉಣಕಲ್ ಹುಲಕೊಪ್ಪ ಸೇತುವೆ ನಿರ್ಮಾಣ ಕಾಮಗಾರಿ ನಡೆದಿದ್ದು, ಅದನ್ನು ವೀಕ್ಷಿಸಿದರು.
ಬೆಂಗೇರಿ ಕಾಂಪ್ಯಾಕ್ಟ್ ಸ್ಟೇಷನ್, ಸ್ಮಾರ್ಟ್ ಸಿಟಿ ಯೋಜನೆಯಡಿ ಜಾರಿಗೊಂಡಿರುವ ವಿವಿಧ ಕಾಮಗಾರಿಗಳನ್ನು ವೀಕ್ಷಿಸಿದರು. ಅದಕ್ಕೂ ಮುನ್ನ ಪೌರ ಕಾರ್ಮಿಕರೊಂದಿಗೆ ಭಾವಚಿತ್ರ ತೆಗೆಸಿಕೊಂಡು, ನಂತರ ಚರ್ಚೆ ನಡೆಸಿದರು.
ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಮಹಾನಗರ ಪಾಲಿಕೆ ಆಯುಕ್ತ ಸುರೇಶ ಇಟ್ನಾಳ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.