ADVERTISEMENT

ಹುಬ್ಬಳ್ಳಿ | ಬೆಳಿಗ್ಗೆ 6ಕ್ಕೆ ಕಾಮಗಾರಿ ಪರಿಶೀಲಿಸಿದ ಸಚಿವ‌ ಭೈರತಿ ಬಸವರಾಜ

​ಪ್ರಜಾವಾಣಿ ವಾರ್ತೆ
Published 9 ಜೂನ್ 2020, 4:37 IST
Last Updated 9 ಜೂನ್ 2020, 4:37 IST
ಸಚಿವ ಭೈರತಿ ಬಸವರಾಜ್ ಹುಬ್ಬಳ್ಳಿಯಲ್ಲಿ ಮಂಗಳವಾರ ಮುಂಜಾನೆ ಕಾಮಗಾರಿ ಪರಿಶೀಲಿಸಿದರು.
ಸಚಿವ ಭೈರತಿ ಬಸವರಾಜ್ ಹುಬ್ಬಳ್ಳಿಯಲ್ಲಿ ಮಂಗಳವಾರ ಮುಂಜಾನೆ ಕಾಮಗಾರಿ ಪರಿಶೀಲಿಸಿದರು.   
""
""

ಹುಬ್ಬಳ್ಳಿ: ನಗರಾಭಿವೃದ್ಧಿ ಸಚಿವ‌ ಭೈರತಿ ಬಸವರಾಜ ಮಂಗಳವಾರ ಬೆಳಿಗ್ಗೆ 6 ಗಂಟೆಯಿಂದಲೇ ನಗರದಲ್ಲಿ ನಡೆದಿರುವ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಕಳೆದ‌ ವರ್ಷ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಉಣಕಲ್ ಹುಲಕೊಪ್ಪ ಸೇತುವೆ ನಿರ್ಮಾಣ ಕಾಮಗಾರಿ ನಡೆದಿದ್ದು, ಅದನ್ನು ವೀಕ್ಷಿಸಿದರು.

ಬೆಂಗೇರಿ ಕಾಂಪ್ಯಾಕ್ಟ್ ಸ್ಟೇಷನ್, ಸ್ಮಾರ್ಟ್ ಸಿಟಿ ಯೋಜನೆಯಡಿ ಜಾರಿಗೊಂಡಿರುವ ವಿವಿಧ ಕಾಮಗಾರಿಗಳನ್ನು ವೀಕ್ಷಿಸಿದರು. ಅದಕ್ಕೂ ಮುನ್ನ ಪೌರ ಕಾರ್ಮಿಕರೊಂದಿಗೆ ಭಾವಚಿತ್ರ ತೆಗೆಸಿಕೊಂಡು, ನಂತರ‌ ಚರ್ಚೆ ನಡೆಸಿದರು.

ADVERTISEMENT

ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಮಹಾನಗರ ಪಾಲಿಕೆ ಆಯುಕ್ತ ಸುರೇಶ ಇಟ್ನಾಳ ಉಪಸ್ಥಿತರಿದ್ದರು.

ಪೌರ ಕಾರ್ಮಿಕರ ಯೋಗಕ್ಷೇಮ ವಿಚಾರಿಸಿದರು
ಕಾಮಗಾರಿ ಪರಿಶೀಲಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.