ಹುಬ್ಬಳ್ಳಿ: ನಗರದ ಕಿಮ್ಸ್ ಆಸ್ಪತ್ರೆ ಆವರಣದಲ್ಲಿ ಐಎಂಎ ಸಹಯೋಗದಲ್ಲಿ ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಶನಿವಾರ ಜಾಗೃತಿ ವಾಕಥಾನ್ ನಡೆಯಿತು.
ಈ ವೇಳೆ ಮಾತನಾಡಿದ ಕ್ಯಾನ್ಸರ್ ವಿಭಾಗದ ಮುಖ್ಯಸ್ಥ ಶಶಿಧರ ಕೆ., ‘ಕಿಮ್ಸ್ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ತೆರೆಯಲಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಘಟಕಗಳನ್ನು ತೆರೆಯಲಾಗುವುದು. ರೋಗಿಗಳು ಚಿಕಿತ್ಸಾ ಸೌಲಭ್ಯದ ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ಹೇಳಿದರು.
ಕಿಮ್ಸ್ ಪ್ರಾಚಾರ್ಯ ಡಾ. ಈಶ್ವರ ಹೊಸಮನಿ ಅವರು ವಾಕಥಾನ್ಗೆ ಚಾಲನೆ ನೀಡಿದರು. ಡಾ. ಗಿರಿಯಪ್ಪಗೌಡ್ರ, ಐಎಂಎ ಅಧ್ಯಕ್ಷ ಸುಭಾಷ್ ಬಬ್ರುವಾಡ, ಅರೆ ವೈದ್ಯಕೀಯ, ನರ್ಸಿಂಗ್ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವಾಕಥಾನ್ನಲ್ಲಿ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.