ADVERTISEMENT

ಛಬ್ಬಿ: ಕೆಂಪು ಗಣಪತಿ ಉತ್ಸವ ಆ. 31ರಿಂದ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2022, 3:55 IST
Last Updated 27 ಆಗಸ್ಟ್ 2022, 3:55 IST

ಹುಬ್ಬಳ್ಳಿ: ತಾಲ್ಲೂಕಿನ ಛಬ್ಬಿ ಗ್ರಾಮದಲ್ಲಿ ಕುಲಕರ್ಣಿ ಮನೆತನದಿಂದ ಕೆಂಪು ಗಣಪತಿ ಉತ್ಸವವು ಆ. 31ರಿಂದ ಸೆ. 2ರವರೆಗೆ ಮೂರು ದಿನಗಳ ನಡೆಯಲಿದೆ. ರಾಮಚಂದ್ರ ಕುಲಕರ್ಣಿ, ಮೋಹನರಾವ ಕುಲಕರ್ಣಿ, ವಿನಾಯಕ ಕುಲಕರ್ಣಿ, ನಾರಾಯಣರಾವ ಕುಲಕರ್ಣಿ, ಸೋಮರಾವ ಕುಲಕರ್ಣಿ, ವಿಶ್ವನಾಥ ಕುಲಕರ್ಣಿ ಹಾಗೂ ಮಾಲತೇಶ ಕುಲಕರ್ಣಿ ಅವರ ಮನೆಗಳಲ್ಲಿ ಅದ್ಧೂರಿಯಾಗಿ ಉತ್ಸವ ಆಚರಿಸಲಾಗುತ್ತಿದೆ.

ಬಲಗೈಯಲ್ಲಿ ಮುರಿದ ದಂತ, ಎಡಗೈಯಲ್ಲಿ ಈಶ್ವರ ಲಿಂಗ ಹಾಗೂ ಉಳಿದೆರಡು ಕೈಗಳಲ್ಲಿ ಆಯುಧಗಳನ್ನು ಹೊಂದಿರುವುದು ಇಲ್ಲಿನ ಕೆಂಪು ಗಣಪತಿಯ ವಿಶೇಷವಾಗಿದೆ. ಮೈಸೂರು ಹಾಗೂ ಇಂದೋರ್‌ನ ಅರಮನೆಗಳಲ್ಲಿ ಮಾತ್ರ ಇಂತಹ ಗಣಪತಿಯನ್ನು ಕಾಣಬಹುದಾಗಿದೆ.

ಉತ್ಸವದ ಮೊದಲ ದಿನ ಏಳು ಮನೆಗಳ ಗಣಪತಿಗಳನ್ನು ಮೆರವಣಿಗೆಯಲ್ಲಿ ತಂದು ಚಂದ್ರೋದಯದ ಸಮಯಕ್ಕೆ ಪ್ರತಿಷ್ಠಾಪಿಸಲಾಗುತ್ತದೆ. ಅಂದು ರಾತ್ರಿ 8.30ರ ನಂತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ನಂತರದ ಎರಡು ದಿನಗಳು ಭಕ್ತರಿಗೆ ಎಲ್ಲಾ ಮನೆಗಳಲ್ಲಿ ಉಚಿತ ದರ್ಶನ ಹಾಗೂ ಪ್ರಸಾದ ವ್ಯವಸ್ಥೆ ಇರಲಿದೆ. ಭಕ್ತರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಹುಬ್ಬಳ್ಳಿಯಿಂದ ವಿಶೇಷ ಬಸ್ ವ್ಯವಸ್ಥೆ ಇರಲಿದೆ ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.