ADVERTISEMENT

ಕಾಲೇಜು ಪ್ರಾರಂಭಕ್ಕೆ ಶೀಘ್ರ ನಿರ್ಧಾರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2022, 5:56 IST
Last Updated 13 ಫೆಬ್ರುವರಿ 2022, 5:56 IST
ಮುಖ್ಯಮಂತ್ರಿ ಬಸವರಾಜ‌ ಬೊಮ್ಮಾಯಿ ಅವರಿಗೆ ಹುಬ್ಬಳ್ಳಿಯ ತಮ್ಮ ನಿವಾಸದ ಬಳಿ ಮನವಿ ಸಲ್ಲಿಸಲು ಸೇರಿದ್ದ ಜನ
ಮುಖ್ಯಮಂತ್ರಿ ಬಸವರಾಜ‌ ಬೊಮ್ಮಾಯಿ ಅವರಿಗೆ ಹುಬ್ಬಳ್ಳಿಯ ತಮ್ಮ ನಿವಾಸದ ಬಳಿ ಮನವಿ ಸಲ್ಲಿಸಲು ಸೇರಿದ್ದ ಜನ   

ಹುಬ್ಬಳ್ಳಿ: ಪದವಿ ಪೂರ್ವ ಕಾಲೇಜುಗಳ ಪ್ರಾರಂಭಕ್ಕೆ ಶೀಘ್ರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರೊಂದಿಗೆ ನಗರದಲ್ಲಿ ಭಾನುವಾರ ಮಾತನಾಡಿದ ಅವರು, ಕೆಲವೇ ದಿನಗಳಲ್ಲಿ ಪಿಯುಸಿ ಪರೀಕ್ಷೆಗಳು ಪ್ರಾರಂಭವಾಗಲಿದ್ದು, ಮಕ್ಕಳ ಪರೀಕ್ಷೆಗೆ ಮೊದಲ ಆದ್ಯತೆ ನೀಡಲಾಗುವುದು.

ಹಿಜಾಬ್ ಮತ್ತು ಕೇಸರಿ ಶಾಲು ವಿವಾದದಲ್ಲಿ ಯಾವ ಸಂಘಟನೆಗಳು ತೊಡಗಿಕೊಂಡಿವೆ, ಯಾರ ಕೈವಾಡ ಇದೆ ಎನ್ನುವುದನ್ನು ತನಿಖಾ ಸಂಸ್ಥೆಗಳು ನೋಡಿಕೊಳ್ಳಲಿವೆ ಎಂದರು‌.

ADVERTISEMENT

ಕಾಲೇಜು ಪ್ರಾರಂಭ ಸಂಬಂಧ ಈಗಾಗಲೇ ಜಿಲ್ಲಾಧಿಕಾರಿಗಳು, ಡಿಡಿಪಿಐ, ಶಾಲಾಡಳಿತ ಮಂಡಳಿಗಳಿಗೆ ಶಾಂತಿ ಸಭೆ ನಡೆಸಲು ಸೂಚನೆ ನೀಡಿರುವೆ ಎಂದರು.

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನೆ ನೀಡುವ, ಸುಳ್ಳು ಸಂದೇಶ ಹರಿಬಿಡುವವರ ಮೇಲೆ ಪೊಲೀಸ್ ಇಲಾಖೆ ನಿಗಾ ವಹಿಸಿದೆ‌ ಎಂದರು.

ಕಳೆದ ಎರಡು ವರ್ಷಗಳಲ್ಲಿ ಆರ್ಥಿಕವಾಗಿ ನಷ್ಟ ಆಗಿದೆ. ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಆರ್ಥಿಕತೆಗೆ ಬೂಸ್ಟ್ ಕೊಡುವ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.