ADVERTISEMENT

ಸಮ್ಮಿಶ್ರ ಸರ್ಕಾರದಲ್ಲಿ ದಲಿತ ಸಮುದಾಯದವರು ಸಿಎಂ ಆಗಲಿ: ಶ್ರೀರಾಮುಲು

​ಪ್ರಜಾವಾಣಿ ವಾರ್ತೆ
Published 16 ಮೇ 2019, 10:45 IST
Last Updated 16 ಮೇ 2019, 10:45 IST
   

ಹುಬ್ಬಳ್ಳಿ:ಸಮ್ಮಿಶ್ರ ಸರ್ಕಾರದಲ್ಲಿ ದಲಿತ ಸಮುದಾಯದ ಮಲ್ಲಿಕಾರ್ಜುನ ಖರ್ಗೆ ಅಥವಾ ಪರಮೇಶ್ವರ ಅವರನ್ನು ಮುಖ್ಯಮಂತ್ರಿ ಮಾಡಲಿ ಎಂದು ಶಾಸಕ ಶ್ರೀರಾಮುಲು ಹೇಳಿದರು.

ಕುಂದಗೋಳ ತಾಲ್ಲೂಕಿನ ದೇವನೂರ ಗ್ರಾಮದಲ್ಲಿ ಗುರುವಾರ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಎಲ್ಲ ಸಮುದಾಯದವರಿಗೂ ಅವಕಾಶ ನೀಡಲಾಗಿದೆ. ಈಗ ಉಳಿದಿರುವುದು ದಲಿತರು ಹಾಗೂ ವಾಲ್ಮೀಕಿ ಜನಾಂಗದವರು ಮಾತ್ರ. ಪರಮೇಶ್ವರ ಅವರು ಸಿ.ಎಂ ಸ್ಥಾನ ಸಿಗಲಿಲ್ಲ ಎಂದು ಕಣ್ಣೀರು ಹಾಕುತ್ತಿದ್ದರು. ಬೇಕಾದರೆ ಅವರನ್ನೇ ಸಿಎಂ ಮಾಡಲಿ ಎಂದರು.

ADVERTISEMENT

ಬಿಜೆಪಿಯಲ್ಲಿ ಯಾರು ಸಿಎಂ ಅಗಬೇಕು, ಡಿಸಿಎಂ ಯಾರಾಗಬೇಕು ಎಂಬುದನ್ನು ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.