ಹುಬ್ಬಳ್ಳಿ: ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ್ ಅವರ ಜನ್ಮದಿನದ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭ ಕೋರಿದರು.
ಬೆಳಿಗ್ಗೆ ಶೆಟ್ಟರ್ ನಿವಾಸಕ್ಕೆ ಬಂದ ಸಿದ್ದರಾಮಯ್ಯ ಅವರನ್ನು ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದರು.
ಶೆಟ್ಟರ್ಗೆ ಹೂಗುಚ್ಛ ನೀಡಿ ಸಿ.ಎಂ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಹಾರ ಹಾಕಲು ಮುಂದಾದಾಗ ಶೋಕಾಚರಣೆ ಇದೆ ಎಂದು ಸಿ.ಎಂ ನಿರಾಕರಿಸಿದರು.
ಬಳಿಕ ಶೆಟ್ಟರ್ ಅವರ ನಿವಾಸದಲ್ಲಿ ಉಪಾಹಾರ ಸೇವಿಸಿದರು.
ಶೆಟ್ಟರ್ ಅವರ ಪತ್ನಿ ಶಿಲ್ಪಾ ಶೆಟ್ಟರ್, ಪುತ್ರ ಸಂಕಲ್ಪ ಶೆಟ್ಟರ್, ಶಾಸಕರಾದ ಎನ್.ಎಚ್.ಕೋನರಡ್ಡಿ, ಪ್ರಸಾದ ಅಬ್ಬಯ್ಯ, ಕಾಂಗ್ರಸ್ ಮುಖಂಡರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.