ADVERTISEMENT

ಕಲ್ಲಿದ್ದಲು ಗಣಿಗಾರಿಕೆಯಲ್ಲಿ ಎಫ್‌ಡಿಐಗೆ ಅವಕಾಶ: ಸಚಿವ ಜೋಶಿ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2019, 3:21 IST
Last Updated 15 ಸೆಪ್ಟೆಂಬರ್ 2019, 3:21 IST
   

ಹುಬ್ಬಳ್ಳಿ: ‘ಕಲ್ಲಿದ್ದಲು ಗಣಿಗಾರಿಕೆಯಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಗೆ (ಎಫ್‌ಡಿಐ) ಅವಕಾಶ ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ’ ಎಂದು ಕೇಂದ್ರದ ಕಲ್ಲಿದ್ದಲು ಮತ್ತು ಗಣಿಗಾರಿಕೆ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಭಾರತವು ಪ್ರಪಂಚದಲ್ಲಿಯೇ ಹೆಚ್ಚು ಕಲ್ಲಿದ್ದಲು ಹೊಂದಿದ ಐದನೇ ರಾಷ್ಟ್ರವಾಗಿದೆ. ಸಾಕಷ್ಟು ಕಲ್ಲಿದ್ದಲು ದೊರೆಯುತ್ತಿದ್ದರೂ, ಹಿಂದಿನ ಯುಪಿಎ ಸರ್ಕಾರ ಅದನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡಿರಲಿಲ್ಲ’ ಎಂದು ದೂರಿದರು.

‘ಮುಂದಿನ ಮೂರು ವರ್ಷಗಳಲ್ಲಿ ಭಾರತ ಕಲ್ಲಿದ್ದಲು ಉತ್ಪಾದನೆಯಲ್ಲಿ ಸಂಪೂರ್ಣ ಸ್ವಾವಲಂಬಿಯಾಗಲಿದೆ. ಕಲ್ಲಿದ್ದಲು ಗಣಿಗಾರಿಕೆ ಹಾಗೂ ವ್ಯಾಪಾರ ಸುಲಭವಾಗಲಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.