ADVERTISEMENT

ಧಾರವಾಡ: ಗೊಬ್ಬರಕ್ಕೆ ಅಧಿಕ ಬೆಲೆ ವಸೂಲಿ: ಆರೋಪ

​ಪ್ರಜಾವಾಣಿ ವಾರ್ತೆ
Published 12 ಜನವರಿ 2022, 5:29 IST
Last Updated 12 ಜನವರಿ 2022, 5:29 IST
ಭಾರತೀಯ ಕಿಸಾನ್ ಸಂಘದ ತಾಲ್ಲೂಕು ಘಟಕದ ಪದಾಧಿಕಾರಿಗಳು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಎನ್.ಎಫ್. ಕಟ್ಟೆಗೌಡರ ಅವರಿಗೆ ಮನವಿ ಸಲ್ಲಿಸಿದರು
ಭಾರತೀಯ ಕಿಸಾನ್ ಸಂಘದ ತಾಲ್ಲೂಕು ಘಟಕದ ಪದಾಧಿಕಾರಿಗಳು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಎನ್.ಎಫ್. ಕಟ್ಟೆಗೌಡರ ಅವರಿಗೆ ಮನವಿ ಸಲ್ಲಿಸಿದರು   

ಕಲಘಟಗಿ: ಖಾಸಗಿ ಗೊಬ್ಬರ ಮಳಿಗೆ ವ್ಯಾಪಾರಸ್ಥರು ನಿಗದಿತ ಬೆಲೆಗೆ ಗೊಬ್ಬರ ಮಾರಾಟ ಮಾಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಭಾರತೀಯ ಕಿಸಾನ್ ಸಂಘದ ತಾಲ್ಲೂಕು ಘಟಕ ತಾಲ್ಲೂಕ ಸಹಾಯಕ ಕೃಷಿ ನಿರ್ದೇಶಕ ಎನ್.ಎಫ್. ಕಟ್ಟೆಗೌಡರ ಅವರಿಗೆ ಮನವಿ ಸಲ್ಲಿಸಿತು.

ರೈತರಿಗೆ ಈಗ ಬೇಸಿಗೆಯ ಹಂಗಾಮಿನ ನೀರಾವರಿ ಕೃಷಿ ಮಾಡಲು ಡಿಎಪಿ ಗೊಬ್ಬರದ ಅವಶ್ಯಕತೆಯಿದೆ, ಆದರೆ ತಾಲ್ಲೂಕಿನಲ್ಲಿ ಕೃಷಿ ಚಟುವಟಿಕೆಗೆ ಬಿತ್ತನೆ ಮಾಡಲು ಗೊಬ್ಬರದ ಅಭಾವ ಸೃಷ್ಟಿಯಾಗಿದೆ. ಕೆಲವೊಂದು ಖಾಸಗಿ ಗೊಬ್ಬರ ಮಳಿಗೆಯ ವ್ಯಾಪಾರಸ್ಥರು ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಿ ನಿಗದಿತ ಬೆಲೆಗೆ ರೈತರಿಗೆ ಗೊಬ್ಬರ ಲಭ್ಯವಾಗುವಂತೆ ಮಾಡಬೇಕು ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿದ ಕಟ್ಟೆಗೌಡರ, ನಿಗದಿತ ಬೆಲೆಯಲ್ಲಿ ಗೊಬ್ಬರ ಮಾರಾಟಕ್ಕೆ ಸೂಚಿಸಲಾಗುವುದು ಎಂದು ತಿಳಿಸಿದರು.

ADVERTISEMENT

ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶಂಕ್ರಪ್ಪ ಮಾದನಬಾವಿ, ಉಪಾಧ್ಯಕ್ಷ ರುದ್ರಗೌಡ ಪಾಟೀಲ, ಉಳವಪ್ಪ ಬಳಿಗೇರ, ಸಿದ್ದಯ್ಯ ಕಟ್ನೂರಮಠ, ಸುರೇಶ್ ಮಂಜರ್ಗಿ, ಶಂಕರಗೌಡ ಪಾಟೀಲ, ಮಣ್ಣಪ್ಪ ಜಾಲಿಹಾಳ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.