ADVERTISEMENT

ಅನಾರೋಗ್ಯ: ಬೆಂಗಳೂರಿಗೆ ಲಾಬೂರಾಮ್ ಏರ್‌ಲಿಫ್ಟ್

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2020, 20:11 IST
Last Updated 12 ನವೆಂಬರ್ 2020, 20:11 IST
ಲಾಬೂರಾಮ್
ಲಾಬೂರಾಮ್   

ಹುಬ್ಬಳ್ಳಿ: ಅನಾರೋಗ್ಯದಿಂದಾಗಿ ಧಾರವಾಡದ ಎಸ್‌ಡಿಎಂ ಆಸ್ಪತ್ರೆಗೆ ದಾಖಲಾಗಿದ್ದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಲಾಬೂರಾಮ್ ಅವರನ್ನು, ಬುಧವಾರ ತಡರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಏರ್‌ಲಿಫ್ಟ್ ಮಾಡಲಾಗಿದೆ.

‘ಲಾಬೂರಾಮ್ ಅವರಿಗೆ ಜ್ವರ ಹಾಗೂ ಗಂಟಲಿನಲ್ಲಿ ಸೋಂಕು ಆಗಿ ಬಾವು ಕಾಣಿಸಿಕೊಂಡಿತ್ತು. ಇದಕ್ಕಾಗಿ, ಸಣ್ಣ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಕುಟುಂಬದವರು ಬೆಂಗಳೂರಿನಲ್ಲಿ ತಮಗೆ ಗೊತ್ತಿರುವ ವೈದ್ಯರ ಬಳಿಯೇ ಮುಂದಿನ ಚಿಕಿತ್ಸೆ ಪಡೆಯುವುದಾಗಿ ಹೇಳಿ, ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ದರು’ ಎಂದು ಧಾರವಾಡದ ಎಸ್‌ಡಿಎಂ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಕಿರಣ್ ಹೆಗಡೆ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT