ADVERTISEMENT

ಅಮರಗೋಳ: ವಿನಯ ಬಿರುಸಿನ ಪ್ರಚಾರ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2019, 7:49 IST
Last Updated 13 ಏಪ್ರಿಲ್ 2019, 7:49 IST
ಕಾಂಗ್ರೆಸ್‌ ಅಭ್ಯರ್ಥಿ ವಿನಯ ಕುಲಕರ್ಣಿ ಮಾತನಾಡಿದರು
ಕಾಂಗ್ರೆಸ್‌ ಅಭ್ಯರ್ಥಿ ವಿನಯ ಕುಲಕರ್ಣಿ ಮಾತನಾಡಿದರು   

ಹುಬ್ಬಳ್ಳಿ: ‘ಅಮರಗೋಳ ಕೃಷಿ ಉತ್ಪನ್ನ ಮಾರುಕಟ್ಟೆ ಸುಧಾರಣೆ ಸೇರಿದಂತೆ ರೈತರ ಏಳಿಗೆಗೆ ಬದ್ಧನಾಗಿದ್ದೆನೆ’ ಎಂದು ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಲಕರ್ಣಿ ಹೇಳಿದರು.

ಎಪಿಎಂಸಿಯಲ್ಲಿ ಶುಕ್ರವಾರ ಮತಯಾಚನೆ ಸಂದರ್ಭದಲ್ಲಿ ಅವರು ಮಾತನಾಡಿದರು.

ಕೇಂದ್ರ ಬಿಜೆಪಿ ಸರ್ಕಾರ ರೈತರನ್ನು ಸಂಪೂರ್ಣವಾಗಿ ಕಡೆಗಣಿಸಿದ್ದು, ಕಿಂಚಿತ್ತೂ ಕಾಳಜಿ ವಹಿಸುತ್ತಿಲ್ಲ. ರೈತರ ಸಾಲ ಮನ್ನಾ ಅನ್ನೋದು ಶೋಕಿ ಎಂದು ಹೇಳುತ್ತಾ ಮೋದಿ ವಿದೇಶಗಳನ್ನು ತಿರುಗಾಡುತ್ತಿದ್ದು, ಕೇವಲ ದೊಡ್ಡ ದೊಡ್ಡ ಉದ್ಯಮಿಗಳ ಸಾಲಮನ್ನಾಕ್ಕೆ ಮುಂದಾಗಿರುವುದು ದುರ್ದೈವವೇ ಸರಿ ಎಂದರು.

ADVERTISEMENT

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಎಚ್.ಕೋನರೆಡ್ಡಿ, ಎಪಿಎಂಸಿ ಅಧ್ಯಕ್ಷ ಜಗನ್ನಾಥಗೌಡ, ಅನಿಲಕುಮಾರ ಪಾಟೀಲ, ರಾಜಣ್ಣ ಕೊರವಿ, ಸುರೇಶ ದಾಸನೂರ, ಈಶ್ವರ ಕಿತ್ತೂರ, ರಘುನಾಥ ಕೆಂಪಲಿಂಗನಗೌಡ್ರ, ಮಂಜುನಾಥ ಮುದರೆಡ್ಡಿ, ಸಲಿಂ ಬ್ಯಾಹಟ್ಟಿ ಹೆಬ್ಬಳ್ಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.