ADVERTISEMENT

ರಾಷ್ಟ್ರ ಜಾಗೃತಿ ಅಭಿಯಾನ: ಸಂತೋಷ ಲಾಡ್‌

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2022, 3:47 IST
Last Updated 10 ಆಗಸ್ಟ್ 2022, 3:47 IST
ಅಳ್ನಾವರದಲ್ಲಿ ಕಾಂಗ್ರೆಸ್ ಮುಖಂಡ ಸಂತೋಷ ಲಾಡ್‌ ಅವರು ಸ್ವಾತಂತ್ರ್ಯೋತ್ವದ ಅಮೃತ ಮಹೋತ್ಸವದ ಅಂಗವಾಗಿ ಪಾದಯಾತ್ರೆ ನಡೆಸಿದರು
ಅಳ್ನಾವರದಲ್ಲಿ ಕಾಂಗ್ರೆಸ್ ಮುಖಂಡ ಸಂತೋಷ ಲಾಡ್‌ ಅವರು ಸ್ವಾತಂತ್ರ್ಯೋತ್ವದ ಅಮೃತ ಮಹೋತ್ಸವದ ಅಂಗವಾಗಿ ಪಾದಯಾತ್ರೆ ನಡೆಸಿದರು   

ಅಳ್ನಾವರ: ದೇಶಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷ ಗತಿಸಿದ ಪ್ರಯುಕ್ತ ಎಸ್. ಲಾಡ್ ಫೌಂಡೇಷನ್ ವತಿಯಿಂದ ರಾಷ್ಟ್ರ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ಮುಖಂಡ ಸಂತೋಷ ಲಾಡ್ ಹೇಳಿದರು.

ಪಟ್ಟಣದಲ್ಲಿ ಕಾರ್ಯಕರ್ತರೊಂದಿಗೆ ಪಾದಯಾತ್ರೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಬಡ ಕುಟುಂಬದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ಸಣ್ಣ ರೈತರಿಗೆ ಹೆಲ್ತ್‌ ಕಾರ್ಡ್‌, ಆನ್‌ಲೈನ್ ಬೆಟ್ಟಿಂಗ್ ಸ್ಥಗಿತ ಹಾಗೂ ದೇಶದಲ್ಲಿ ಮಾದಕ ವಸ್ತು ಮಾಫಿಯಾ ಸಂಪೂರ್ಣ ನಿಲ್ಲಿಸುವಂತೆ ಸರ್ಕಾರವನ್ನು ಒತ್ತಾಯಿಸಲಾಗುವುದು’ ಎಂದರು.

ADVERTISEMENT

ಕಾಂಗ್ರೆಸ್ ಸೇರ್ಪಡೆ: ದೇವರ ಹುಬ್ಬಳ್ಳಿ ಗ್ರಾಮದ ಬಿಜೆಪಿ ಮುಖಂಡರಾದ ಅರ್ಜುನ್‌ ಪಾಟೀಲ, ಮಂಜುನಾಥ ಮುದಕವಿ ಅವರು ಕಾಂಗ್ರೆಸ್‌ ಸೇರ್ಪಡೆಯಾದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಕರಿಗೌಡರ, ಮಲ್ಲನಗೌಡ ಪಾಟೀಲ, ಹಸನಲಿ ಶೇಖ, ಸುವರ್ಣ ಕಡಕೋಳ, ರಮೇಶ ಕುನ್ನೂರಕರ, ನಿಂಗಪ್ಪ ಬೇಕ್ವಾಡಕರ, ಮಧು ಬಡಸ್ಕರ್, ಭಾಗ್ಯವತಿ ಕುರುಬರ, ಸುಮಿತ್ರಾ ಮಾಂಗಜಿ, ಬೆರೆಟ್ಟೊ, ಶ್ರೀಕಾಂತ ಗಾಯಕವಾಡ, ರಾಯಪ್ಪ ಹುಡೇದ, ಅನ್ವರಖಾನ ಬಾಗೇವಾಡಿ, ಸತ್ತಾರ ಬಾತಖಂಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.