ADVERTISEMENT

ಧಾರವಾಡ: ರಸ್ತೆ ದುರಸ್ತಿಗೆ ಕಾಂಗ್ರೆಸ್ ಮನವಿ

​ಪ್ರಜಾವಾಣಿ ವಾರ್ತೆ
Published 15 ಜನವರಿ 2022, 8:41 IST
Last Updated 15 ಜನವರಿ 2022, 8:41 IST
ಧಾರವಾಡದ ಜಿಲ್ಲಾ ಪಂಚಾಯ್ತಿ ಅಧಿಕಾರಿಗೆ ಕಾಂಗ್ರೆಸ್ ಮುಖಂಡ ಎನ್‌.ಎಚ್. ಕೋನರಡ್ಡಿ ಹಾಗೂ ವಿನೋದ ಅಸೂಟಿ ಶುಕ್ರವಾರ ಮನವಿ ಸಲ್ಲಿಸಿದರು
ಧಾರವಾಡದ ಜಿಲ್ಲಾ ಪಂಚಾಯ್ತಿ ಅಧಿಕಾರಿಗೆ ಕಾಂಗ್ರೆಸ್ ಮುಖಂಡ ಎನ್‌.ಎಚ್. ಕೋನರಡ್ಡಿ ಹಾಗೂ ವಿನೋದ ಅಸೂಟಿ ಶುಕ್ರವಾರ ಮನವಿ ಸಲ್ಲಿಸಿದರು   

ಧಾರವಾಡ: ‘ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲ್ಲೂಕಿನ ಗ್ರಾಮೀಣ ಭಾಗದ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ತಕ್ಷಣ ದುರಸ್ತಿಗೊಳಿಸಬೇಕು’ ಎಂದು ಕಾಂಗ್ರೆಸ್ ಮುಖಂಡ ಎನ್.ಎಚ್. ಕೋನರಡ್ಡಿ ಆಗ್ರಹಿಸಿದ್ದಾರೆ.

ಜಿಲ್ಲಾ ಪಂಚಾಯ್ತಿ ಅಧಿಕಾರಿಗಳ ಮೂಲಕ ಮುಖ್ಯಮಂತ್ರಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಿಗೆ ಶುಕ್ರವಾರ ಮನವಿ ಸಲ್ಲಿಸಿದ ಅವರು, ‘ರಸ್ತೆಗಳು ಹದಗೆಟ್ಟಿರುವುದರಿಂದ ಜಮೀನುಗಳಿಗೆ ಹೋಗಿ ಬರಲು ರೈತರಿಗೆ ತೊಂದರೆಯಾಗಿದೆ.ಸರ್ಕಾರ ಒಂದು ತಿಂಗಳೊಳಗೆ ರಸ್ತೆಗಳನ್ನು ದುರಸ್ತಿ ಮಾಡಬೇಕು. ಇಲ್ಲದಿದ್ದರೆ, ವಂತಿಗೆ ಸಂಗ್ರಹಿಸಿ ರೈತರೊಂದಿಗೆ ರಸ್ತೆ ದುರಸ್ತಿ ಮಾಡಲಾಗುವುದು’ ಎಂದಿದ್ದಾರೆ.

‘2018ಕ್ಕೂ ಮುಂಚೆ ಚಕ್ಕಡಿ ರಸ್ತೆಗಳನ್ನು ಅಗಲೀಕರಣ ಮಾಡಿ ಅಭಿವೃದ್ಧಿಪಡಿಸಲಾಗಿತ್ತು. ಮೂರು ವರ್ಷಗಳಲ್ಲಿ ಅವುಗಳ ನಿರ್ವಹಣೆ ಮಾಡದ ಕಾರಣ ರಸ್ತೆಗಳು ತೀರಾ ಹದಗೆಟ್ಟಿವೆ. ಜಿಲ್ಲಾ ಪಂಚಾಯ್ತಿ ಮೂಲಕ ಯಾವುದೇ ಅಭಿವೃದ್ಧಿ ಕಾಮಗಾರಿಗಳನ್ನು ಈವರೆಗೂ ತೆಗೆದುಕೊಂಡಿಲ್ಲ. ರೈತರ ಸಮಸ್ಯೆ ಅರಿತು ಸರ್ಕಾರ ಶೀಘ್ರದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

ADVERTISEMENT

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿನೋದ ಅಸೂಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.