ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಕಾಂಗ್ರೆಸ್ ಶಾಸಕಿ ಕುಸುಮಾವತಿ ಶಿವಳ್ಳಿಗೆ ಭಾನುವಾರ ಕೊರೊನಾ ಸೋಂಕು ದೃಢಪಟ್ಟಿದೆ. ಅಧಿವೇಶನಕ್ಕೆ ಹೋಗಲು ಅವರು ಪರೀಕ್ಷೆಗೆ ಒಳಗಾಗಿದ್ದರು.
‘ಕೆಲ ದಿನಗಳಿಂದ ನೆಗಡಿಯಿತ್ತು. ಅಧಿವೇಶನಕ್ಕೆ ಹೋಗಬೇಕಿದ್ದರಿಂದ ಪರೀಕ್ಷೆಗೆ ಒಳಗಾಗಿದ್ದೆ. ಭಾನುವಾರ ವರದಿ ಬಂದಿದ್ದು, ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದೇನೆ’ ಎಂದು ಕುಸುಮಾವತಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.