ADVERTISEMENT

ಹುಬ್ಬಳ್ಳಿ: ಶಾಲೆಗೆ ಭೇಟಿ ನೀಡಿದ ಬಸವರಾಜ ಹೊರಟ್ಟಿ, ಪ್ರಸಾದ ಅಬ್ಬಯ್ಯ

​ಪ್ರಜಾವಾಣಿ ವಾರ್ತೆ
Published 1 ಜನವರಿ 2021, 7:10 IST
Last Updated 1 ಜನವರಿ 2021, 7:10 IST
   

ಹುಬ್ಬಳ್ಳಿ: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶುಕ್ರವಾರ ತರಗತಿ ಆರಂಭವಾದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಮತ್ತು ಶಾಸಕ ಪ್ರಸಾದ ಅಬ್ಬಯ್ಯ ಅವರು, ಹುಬ್ಬಳ್ಳಿಯ ಪೆಂಡಾರಗಲ್ಲಿಯ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಜತೆ ಮಾತನಾಡಿದರು.

ತರಗತಿಗಳಲ್ಲಿ ಕೈಗೊಂಡಿರುವ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಪರಿಶೀಲಿಸಿದರು‌.

ಹುಬ್ಬಳ್ಳಿಯ ಶಾಲಾ- ಕಾಲೇಜುಗಳಲ್ಲಿ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಕೊಂಡು ತರಗತಿ ಆರಂಭಿಸಲಾಗಿದೆ. ಅರ್ಧದಷ್ಟು ಸಂಖ್ಯೆಯ ವಿದ್ಯಾರ್ಥಿಗಳು ಮಾತ್ರ ಮೊದಲ ದಿನದ ತರಗತಿಗಳಿಗೆ ಹಾಜರಾಗಿದ್ದಾರೆ. ತರಗತಿಯಲ್ಲಿ ಪರಸ್ಪರ ಅಂತರ ಕಾಯ್ದುಕೊಂಡು ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿತ್ತು. ಶಾಲೆ ಪ್ರವೇಶ ದ್ವಾರದಲ್ಲಿ ಎಲ್ಲರಿಗೂ ಥರ್ಮಲ್ ಸ್ಕ್ರೀನಿಂಗ್ ಮಾಡಿ, ಕೈಗಳಿಗೆ ಸ್ಯಾನಿಟೈಸರ್ ಸಿಂಪಡಿಸಿ ಒಳಕ್ಕೆ ಬಿಡಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.