ADVERTISEMENT

ಕ್ರಿಕೆಟ್‌: ಎಚ್‌ಎಸ್‌ಸಿ ತಂಡಕ್ಕೆ ಗೆಲುವು

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2021, 6:35 IST
Last Updated 15 ಫೆಬ್ರುವರಿ 2021, 6:35 IST
ಸಮರ್ಥ್‌ ಬಿ.
ಸಮರ್ಥ್‌ ಬಿ.   

ಹುಬ್ಬಳ್ಳಿ: ಅಲ್ಪ ಮೊತ್ತದ ಗುರಿಯನ್ನು ಸುಲಭವಾಗಿ ಮುಟ್ಟಿದ ಹುಬ್ಬಳ್ಳಿ ಸ್ಪೋರ್ಟ್ಸ್‌ ಕ್ಲಬ್‌ (ಎಚ್‌ಎಸ್‌ಸಿ) ತಂಡ 16 ವರ್ಷದ ಒಳಗಿನವರ ‘ಪಿಆರ್‌ಎನ್‌’ ಟ್ರೋಫಿ ಅಂತರ ಕ್ಯಾಂಪ್‌ಗಳ ಆಹ್ವಾನಿತ ಕ್ರಿಕೆಟ್ ಟೂರ್ನಿಯ ತನ್ನ ಮೊದಲ ಪಂದ್ಯದಲ್ಲಿ ನಾಲ್ಕು ವಿಕೆಟ್‌ಗಳ ಗೆಲುವು ಸಾಧಿಸಿತು.

ಮೊದಲು ಬ್ಯಾಟ್ ಮಾಡಿದ ತೇಜಲ್‌ ಶಿರಗುಪ್ಪಿ ಅಕಾಡೆಮಿ 19.4 ಓವರ್‌ಗಳಲ್ಲಿ 47 ರನ್‌ ಗಳಿಸಿತು. ಈ ಗುರಿಯನ್ನು ಎಚ್‌ಎಸ್‌ಸಿ 14.5 ಓವರ್‌ಗಳಲ್ಲಿ ಆರು ವಿಕೆಟ್‌ ಕಳೆದುಕೊಂಡು ತಲುಪಿತು. ವಿಜಯಿ ತಂಡದ ಬಿ. ಸಮರ್ಥ್‌, ಕೆ. ಶಾಹೀದ್‌ ತಲಾ ಮೂರು ವಿಕೆಟ್‌ ಉರುಳಿಸಿದರು. ಸಮರ್ಥ್‌ ಪಂದ್ಯ ಶ್ರೇಷ್ಠ ಗೌರವ ಪಡೆದರು.

ದಿನದ ಇನ್ನೊಂದು ಪಂದ್ಯದಲ್ಲಿ ಬಿಡಿಕೆ ಸ್ಪೋರ್ಟ್ಸ್ ಫೌಂಡೇಷನ್‌ 30 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 183 ರನ್‌ ಗಳಿಸಿತು. ಇದಕ್ಕುತ್ತರವಾಗಿ ಫಸ್ಟ್‌ ಕ್ರಿಕೆಟ್‌ ಅಕಾಡೆಮಿ 29.2 ಓವರ್‌ಗಳಲ್ಲಿ 121 ರನ್ ಕಲೆಹಾಕಿ ಆಲೌಟ್‌ ಆಯಿತು. 84 ಎಸೆತಗಳಲ್ಲಿ 87 ರನ್ ಗಳಿಸಿದ ಬಿಡಿಕೆ ತಂಡದ ಪವನ್‌ ನಾಗೇಶ ಪಂದ್ಯ ಶ್ರೇಷ್ಠ ಗೌರವಕ್ಕೆ ಭಾಜನರಾದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.