ADVERTISEMENT

ವಕೀಲ ರವಿ ಹತ್ಯೆ ಆರೋಪಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2024, 15:49 IST
Last Updated 13 ಆಗಸ್ಟ್ 2024, 15:49 IST
ವಿಜಯಪುರದ ವಕೀಲ ರವಿ ಮೇಲಿನಮನಿ ಅವರನ್ನು ಕೊಲೆ ಮಾಡಿದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ನವಲಗುಂದ ತಾಲ್ಲೂಕು ವಕೀಲರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಕಚೇರಿಗೆ ಮನವಿ ಸಲ್ಲಿಸಿದರು
ವಿಜಯಪುರದ ವಕೀಲ ರವಿ ಮೇಲಿನಮನಿ ಅವರನ್ನು ಕೊಲೆ ಮಾಡಿದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ನವಲಗುಂದ ತಾಲ್ಲೂಕು ವಕೀಲರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಕಚೇರಿಗೆ ಮನವಿ ಸಲ್ಲಿಸಿದರು   

ನವಲಗುಂದ: ವಿಜಯಪುರ ಜಿಲ್ಲೆಯ ವಕೀಲರ ಸಂಘದ ಸದಸ್ಯ ರವಿ ಮೇಲಿನಮನಿ ಹತ್ಯೆಯ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ ಮತ್ತು ವಕೀಲರಿಗೆ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಪಿ.ಎಚ್.ಕೋನರಡ್ಡಿ ಆಗ್ರಹಿಸಿದರು.

ಅವರು ಮಂಗಳವಾರ ವಕೀಲರ ಸಂಘದ ವತಿಯಿಂದ ನಡೆದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದರು.

ನಂತರ ತಹಶೀಲ್ದಾರ್ ಕಚೇರಿಯ ಶಿರಸ್ತೇದಾರ ಕೃಷ್ಣಾಜಿ ಅರೇರ ಅವರ ಮೂಲಕ ಮುಖ್ಯಮಂತ್ರಿಗಳ ಕಚೇರಿಗೆ ಮನವಿ ರವಾನಿಸಿದರು.

ADVERTISEMENT

ಸಂಘದ ಪದಾಧಿಕಾರಿಗಳಾದ ಎನ್.ಬಿ.ಸವದಿ, ಎಸ್.ಎಸ್.ಅಸೂಟಿ, ಎಸ್.ಎನ್.ಡಂಬಳ, ಎ.ಎಸ್.ಹೊಳೆಯಣ್ಣನವರ, ಎ.ಎಲ್.ಜಾಂಬೋಟಿ, ನಮೀತ್ ಪಾಟೀಲ, ಆರ್.ವಿ.ಸಂಗಳದ, ಅರ್ಚನಾ ಜೋಶಿ, ಎಸ್.ಎಸ್.ಮಹಾರಾಜನವರ, ಕೆ.ಆರ್.ಮೇಟಿ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.