ADVERTISEMENT

ಹುಬ್ಬಳ್ಳಿ: ರೌಡಿ ಶೀಟರ್ ಅಕ್ಬರ್ ಮುಲ್ಲಾ ಹತ್ಯೆ

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2022, 7:33 IST
Last Updated 11 ಮಾರ್ಚ್ 2022, 7:33 IST
ಅಕ್ಬರ್ ಮುಲ್ಲಾ
ಅಕ್ಬರ್ ಮುಲ್ಲಾ    

ಹುಬ್ಬಳ್ಳಿ: ಇಲ್ಲಿನ ಅರವಿಂದ ನಗರದ ಪಿಎನ್‌ಟಿ ಕ್ವಾಟ್ರಸ್ ಹಿಂದಿನ ರಸ್ತೆಯಲ್ಲಿ ಗುರುವಾರ ರಾತ್ರಿ ದುಷ್ಕರ್ಮಿಗಳ ಗುಂಪೊಂದು, ತೊರವಿ ಹಕ್ಕಲದ ರೌಡಿ ಶೀಟರ್ ಅಕ್ಬರ್ ಮುಲ್ಲಾ ಎಂಬಾತನನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿದೆ.

ಅಕ್ಬರ್ ತನ್ನ ಸ್ನೇಹಿತರಾದ ಶಿರಡಿನಗರದ ರಮೇಶ ನೀರಗಟ್ಟಿ ಹಾಗೂ ಇಂದಿರಾನಗರದ ನವೀನ್ ಎಂಬುವವರೊಂದಿಗೆ ಮಧ್ಯ ಕುಡಿದು, ರಾತ್ರಿ 11.30ರ ಸುಮಾರಿಗೆ ಮನೆಗೆ ಬರುವಾಗ ತದನಂತರ ಮನೆಗೆ ಬರುವಾಗ ಗುಂಪು ಲಾಂಗ್ ಹಾಗೂ ಮಚ್ಚಿನಿಂದ ಹಲ್ಲೆ ನಡೆಸಿ ಪರಾರಿಯಾಗಿದೆ. ತೀವ್ರವಾಗಿ ಗಾಯಗೊಂಡ ಅಕ್ಬರ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆ ಕುರಿತು ಒಬ್ಬನನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ತಿಳಿಸಿದ್ದಾರೆ.

ಓದಿ...

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.