ADVERTISEMENT

ಹುಬ್ಬಳ್ಳಿ| ಲಾಭದ ಆಮಿಷ; ಬ್ಯಾಂಕ್‌ ನೌಕರನಿಗೆ ₹39.42 ಲಕ್ಷ ವಂಚನೆ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2025, 4:30 IST
Last Updated 14 ಅಕ್ಟೋಬರ್ 2025, 4:30 IST
   

ಹುಬ್ಬಳ್ಳಿ: ಕ್ರಿಪ್ಟೊ ಕರೆನ್ಸಿಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಗಳಿಸಬಹುದು ಎಂದು ನಂಬಿಸಿ ಇಲ್ಲಿನ ಕೇಶ್ವಾಪುರದ ನಿವಾಸಿ, ಬ್ಯಾಂಕ್‌ ಉದ್ಯೋಗಿ ಪಾರುಶ್ ಗೌರ್ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ₹39.42 ಲಕ್ಷ ವಂಚಿಸಿದ್ಧಾನೆ.

‘ಪಾರುಶ್ ಅವರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ, ಆಪ್ಷನ್‌ ಟ್ರೇಡಿಂಗ್ ಮತ್ತು ಕ್ರಿಪ್ಟೊ ಕರೆನ್ಸಿಯಲ್ಲಿ ಹಣ ಹೂಡಿಕೆ ಮಾಡಿದರೆ ಲಾಭ ಗಳಿಸಬಹುದು ಎಂದು ಹೇಳಿದ್ದಾನೆ. ನಂತರ ಟೆಲಿಗ್ರಾಂ ಆ್ಯಪ್ ಮೂಲಕ ಸಂಪರ್ಕಿಸಿ, ಲಾಭದ ಆಮಿಷವೊಡ್ಡಿ ವಿವಿಧ ಬ್ಯಾಂಕ್ ಖಾತೆಗಳಿಂದ ₹39,42 ಲಕ್ಷ ವರ್ಗಾಯಿಸಿಕೊಂಡು ಲಾಭಾಂಶ ನೀಡದೆ, ಹೂಡಿಕೆ ಮಾಡಿದ ಹಣ ಮರಳಿಸದೆ ವಂಚಿಸಿದ್ದಾನೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರುಗಳ ರಕ್ಷಣೆ; ನಾಲ್ವರ ಬಂಧನ:

ADVERTISEMENT

ತಾಲ್ಲೂಕಿನ ಕುಸುಗಲ್ ಗ್ರಾಮದಿಂದ ಬ್ಯಾಹಟ್ಟಿ ಮಾರ್ಗವಾಗಿ ಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಆರು ಕರುಗಳನ್ನು ಗ್ರಾಮೀಣ ಠಾಣೆ ಪೊಲೀಸರು ರಕ್ಷಣೆ ಮಾಡಿ, ನಾಲ್ವರನ್ನು ಬಂಧಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಮಲ್ಲಾಪುರದ ನಿವಾಸಿ ತಸ್ಲೀಮ್ ಮುಲ್ಲಾ, ನದೀಮ್ ಬೇಪಾರಿ, ಖಾಜೇಸಾಬ ಬೇಪಾರಿ, ಶಾರುಖ್ ಬೇಪಾರಿ ಬಂಧಿತರು.

₹ಆರೋಪಿಗಳು 1.47 ಲಕ್ಷದ ಮೌಲ್ಯದ ಜರ್ಸಿ, ಗಿರ್, ಜವಾರಿ, ಎಚ್ಎಫ್ ತಳಿಯ ಕರುಗಳನ್ನು ಮೇವು ಮತ್ತು ನೀರಿನ ವ್ಯವಸ್ಥೆ ಇಲ್ಲದೆ, ಹಿಂಸೆ ಆಗುವಂತಹ ರೀತಿಯಲ್ಲಿ ವಾಹನದಲ್ಲಿ ತುಂಬಿಕೊಂಡು ಕಸಾಯಿಖಾನೆಗೆ ಸಾಗಿಸುತ್ತಿದ್ದಾಗ ದಾಳಿ ನಡೆಸಲಾಯಿತು’ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.