ಹುಬ್ಬಳ್ಳಿ: ನಗರದ ಹೂಗಾರ ಓಣಿಯ ಮನೆಯೊಂದರಲ್ಲಿ ಶನಿವಾರ ಬೆಳಿಗ್ಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು, ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಅಮಿತ ಕುಮಸಿ, ಅವರ ಪತ್ನಿ ಮಂಜುಳಾ, ಮಕ್ಕಳಾದ ಸಾಯಿರಾಮ್ ಹಾಗೂ ಪ್ರೀತಂಗೆ ಸುಟ್ಟ ಗಾಯಗಳಾಗಿದ್ದು, ಎಲ್ಲರನ್ನೂ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಬಂದಅಗ್ನಿಶಾಮಕ ಅಧಿಕಾರಿ ಚಂದ್ರಶೇಖರ್ ಭಂಡಾರಿ ನೇತೃತ್ವದ ತಂಡ ಬೆಂಕಿ ನಂದಿಸಿದೆ. ಘಟನೆಯಲ್ಲಿ ಮನೆ ಜಖಂಗೊಂಡಿದೆ.
ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಅಮಿತ ಅವರು, ನಮ್ಮ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಮನೆಯವರು ರಾತ್ರಿ ಸಿಲಿಂಡರ್ ಆಫ್ ಮಾಡುವುದನ್ನು ಮರೆತಿರುವುದರಿಂದ, ರಾತ್ರಿಯಿಡೀ ಅನಿಲ ಸೋರಿಕೆಯಾಗಿದೆ. ಬೆಳಿಗ್ಗೆ 8ರ ಹೊತ್ತಿಗೆ ಅಮಿತ ಅವರ ಪತ್ನಿ ಟೀ ಮಾಡಲು ಲೈಟರ್ ಹೊತ್ತಿಸಿದಾಗ ಸಿಲಿಂಡರ್ ಸ್ಫೋಟಗೊಂಡಿದೆ. ಗಾಯಗೊಂಡ ನಾಲ್ವರನ್ನು ಅಕ್ಕಪಕ್ಕದವರು ಆಂಬುಲೆನ್ಸ್ನಲ್ಲಿ ಕಿಮ್ಸ್ ಗೆ ಸಾಗಿಸಿದರು ಎಂದು ಮನೆ ಮಾಲೀಕ ಫಕ್ಕೀರಪ್ಪ ಶೆಟ್ಟರ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.