ADVERTISEMENT

ಅಣ್ಣಿಗೇರಿ | ಬಸ್‌ನಲ್ಲಿ ಬೆಂಕಿ ಅವಘಡ; ಪ್ರಯಾಣಿಕರು ಪಾರು

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2024, 16:08 IST
Last Updated 17 ಏಪ್ರಿಲ್ 2024, 16:08 IST

ಅಣ್ಣಿಗೇರಿ: ಸಮೀಪದ ನವಲಗುಂದ ರೈಲ್ವೆ ಗೇಟ್ ಹತ್ತಿರ ಬುಧವಾರ ಸಂಜೆ ನವಲಗುಂದ ಡಿಪೊದ ಸಾರಿಗೆ ಸಂಸ್ಥೆಯ ಬಸ್‌ಗೆ ಬೆಂಕಿ ತಗುಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಬೆಂಕಿ ಕಾಣಿಸಿಕೊಂಡ ತಕ್ಷಣ ಅಗ್ನಿ ಶಾಮಕ ಠಾಣೆಗೆ ಮಾಹಿತಿ ನೀಡಲಾಯಿತು. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದರು. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಬಸ್ ನವಲಗುಂದದಿಂದ ಗದಗಕ್ಕೆ ಹೋಗುತ್ತಿತ್ತು. ಬಸ್‌ನಲ್ಲಿ 25 ಪ್ರಯಾಣಿಕರು ಇದ್ದರು. ಈ ಕುರಿತು ಅಣ್ಣಿಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.