
ಪ್ರಜಾವಾಣಿ ವಾರ್ತೆ
ಎಫ್ಐಆರ್
ಧಾರವಾಡ: ಜಿಲ್ಲೆಯ ಕುಂದುಗೋಳ ಪಟ್ಟಣದಲ್ಲಿ ಬುಧವಾರ ನಡೆದ ನಿಂಗರಾಜ ಅವಾರಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಬಾಲಕರನ್ನು ಪೊಲೀಸರು ವಶಕ್ಕೆ ಪಡೆದಿದ್ಧಾರೆ.
‘ಸಾಮಾಜಿಕ ಮಾಧ್ಯಮದ (ಇನ್ಸ್ಟಾಗ್ರಾಂ) ಪೋಸ್ಟ್ ವಿಚಾರದಲ್ಲಿ ಬಾಲಕರು ಪರಸ್ಪರ ಜಗಳವಾಡಿದ್ದಾರೆ. ಮೂವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗಿದೆ. ತನಿಖೆ ಮುಂದುವರಿದಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ‘ಪ್ರಜಾವಾಣಿ’ಗೆ ತಿಳಿಸಿದರು.
ಕುಂದಗೋಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.