ADVERTISEMENT

ಸಚಿವ ಸ್ಥಾನಕ್ಕೆ ಲಾಬಿ ಮಾಡಿಲ್ಲ: ಮುನೇನಕೊಪ್ಪ

​ಪ್ರಜಾವಾಣಿ ವಾರ್ತೆ
Published 12 ಮೇ 2023, 13:20 IST
Last Updated 12 ಮೇ 2023, 13:20 IST

ಹುಬ್ಬಳ್ಳಿ: ‘ಅರವಿಂದ ಬೆಲ್ಲದ ಅವರ ರೀತಿಯಲ್ಲಿ ಸಚಿವ ಸ್ಥಾನಕ್ಕಾಗಿ ನಾನು ಲಾಬಿ ಮಾಡಿಲ್ಲ. ಮುಂದೆಯೂ ಮಾಡುವುದಿಲ್ಲ. ಹಿರಿಯರ ಸಹಕಾರದಿಂದ ಸಚಿವನಾದೆ’ ಎಂದು ಸಚಿವ ಶಂಕರಪಾಟೀಲ ಮುನೇನಕೊಪ್ಪ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹಿರಿಯ ನಾಯಕರಾಗಿದ್ದ ಜಗದೀಶ ಶೆಟ್ಟರ್ ಅವರು ನನಗೆ ಬೆಂಬಲ ನೀಡಿದ್ದರು. ಜಿಲ್ಲೆಯಲ್ಲಿ ಅವರನ್ನು ಬಿಟ್ಟರೆ, ನಾನು ಹಿರಿಯ. ಶೆಟ್ಟರ್, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸೇರಿದಂತೆ ಎಲ್ಲರೊಂದಿಗೂ ಸಂಬಂಧ ಚೆನ್ನಾಗಿದೆ’ ಎಂದರು.

‘ಜಿಲ್ಲೆಯಲ್ಲಿ ನಡೆದ ಕೆಲ ಘಟನೆಯಿಂದಾಗಿ ಕಾರ್ಯಕರ್ತರಿಗೆ ನೋವಾಗಿದೆ’ ಎಂದ ಅವರು, ಶೆಟ್ಟರ್ ಅವರು ಕಾಂಗ್ರೆಸ್ ಸೇರಿದ್ದರ ಕುರಿತು ನೋವು ವ್ಯಕ್ತಪಡಿಸಿದರು.

ADVERTISEMENT

‘ಮತದಾನೋತ್ತರ ಸಮೀಕ್ಷೆಗಳು ಏನೇ ಇರಲಿ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಹಿಂದೆ ಸಮೀಕ್ಷೆಗಳನ್ನು ಮೀರಿ ಪಕ್ಷ ಹೆಚ್ಚು ಸ್ಥಾನಗಳನ್ನು ಗಳಿಸಿ ಅಧಿಕಾರ ನಡೆಸಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.