ADVERTISEMENT

ಡಾ. ಗುರುಲಿಂಗ ಕಾಪಸೆಗೆ ವಿದ್ಯಾವರ್ಧಕ ಸಂಘದ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 4 ಜುಲೈ 2022, 13:25 IST
Last Updated 4 ಜುಲೈ 2022, 13:25 IST
ಡಾ. ಗುರುಲಿಂಗ ಕಾಪಸೆ
ಡಾ. ಗುರುಲಿಂಗ ಕಾಪಸೆ   

ಧಾರವಾಡ: ‘ಕರ್ನಾಟಕ ವಿದ್ಯಾವರ್ಧಕ ಸಂಘವು ಇದೇ ಮೊದಲ ಬಾರಿಗೆ ನೀಡುತ್ತಿರುವ ಸಿರಿಗನ್ನಡಂಗ ಗೆಲ್ಗೆ ರಾ.ಹ.ದೇಶಪಾಂಡೆ ಪ್ರಶಸ್ತಿಯುಹಿರಿಯ ಸಾಹಿತಿ ಡಾ. ಗುರುಲಿಂಗ ಕಾಪಸೆ ಅವರಿಗೆ ಲಭಿಸಿದೆ’ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಹೇಳಿದರು.

‘ಅದೇ ರೀತಿ ಕನ್ನಡ ಪ್ರಪಂಚ ಪಾಟೀಲ ಪುಟ್ಟಪ್ಪ ಪ್ರಶಸ್ತಿಯು ಸಂಯುಕ್ತ ಕರ್ನಾಟಕ ಪತ್ರಿಕೆಗೆ ಲಭಿಸಿದೆ. ಎರಡೂ ಪ್ರಶಸ್ತಿಗಳು ತಲಾ ₹50ಸಾವಿರ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ಸಂಘದ 133ನೇ ವರ್ಷಾಚರಣೆ ನಡೆಯುತ್ತಿರುವ ಸಂದರ್ಭದಲ್ಲಿ ಸಂಘವನ್ನು ಕಟ್ಟಿಬೆಳೆಸಿದ ಮಹನೀಯರ ಹೆಸರನ್ನು ಶಾಶ್ವತವಾಗಿಸುವ ಪ್ರಯತ್ನ ಇದಾಗಿದೆ. ಇವುಗಳಿಗೆ ಅಗತ್ಯವಿರುವ ಹಣವನ್ನು ಸಂಘದ ಆಂತರಿಕ ಸಂಪನ್ಮೂಲಗಳಿಂದ ಸಂಗ್ರಹಿಸಿ ನೀಡಲಾಗುವುದು. ಪ್ರಶಸ್ತಿ ಪ್ರದಾನ ಸಮಾರಂಭವು ಸಂಘದ ಸ್ಥಾಪನೆಯಾದ ಜುಲೈ 20ರಂದು ನೀಡಲಾಗುವುದು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.