ADVERTISEMENT

ದ್ಯಾಮವ್ವದೇವಿ ಜಾತ್ರಾಮಹೋತ್ಸವ ಇಂದಿನಿಂದ

​ಪ್ರಜಾವಾಣಿ ವಾರ್ತೆ
Published 6 ಮೇ 2022, 5:11 IST
Last Updated 6 ಮೇ 2022, 5:11 IST
ಕುಂದಗೋಳ :ಫೋಟೋ: ಶ್ರೀ ದ್ಯಾಮವ್ವದೇವಿ
ಕುಂದಗೋಳ :ಫೋಟೋ: ಶ್ರೀ ದ್ಯಾಮವ್ವದೇವಿ   

ಕುಂದಗೋಳ: ಪಟ್ಟಣದ ಗ್ರಾಮದೇವತೆ ಶ್ರೀ ದ್ಯಾಮವ್ವದೇವಿ ಜಾತ್ರಾಮಹೋತ್ಸವ, ಮೂರ್ತಿ ಪ್ರತಿಷ್ಠಾಪನೆ, ನೂತನ ಗೋಪುರ ಹಾಗು ಕಳಸಾರೋಹಣ ಕಾರ್ಯಕ್ರಮಗಳು ಮೇ 6ರಿಂದ 13 ರವರೆಗೆ ಜರುಗಲಿವೆ ಎಂದು ಸೇವಾ ಸಮೀತಿಯ ರಾಜು ಶಿವಳ್ಳಿ ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿರಹಟ್ಟಿಯ ಜಗದ್ಗುರು ಫಕೀರ ಸಿದ್ದರಾಮ ಸ್ವಾಮೀಜಿ, ಹನ್ನೆರಡು ಮಠದ ರೇವಣಸಿದ್ದ ಶಿವಾಚಾರ್ಯ ಸ್ವಾಮೀಜಿ, ಕುಂದಗೋಳ ಹಿರೇಮಠದ ಶಿತಿಕಂಠೇಶ್ವರ ಸ್ವಾಮೀಜಿ, ಶಿವಾನಂದ ಮಠದ ಮಲ್ಲಯ್ಯ ಸ್ವಾಮೀಜಿ, ಕಲ್ಯಾಣಪುರದ ಬಸವಣ್ಣಜ್ಜನವರ ಸಾನ್ನಿಧ್ಯದಲ್ಲಿ ಎಲ್ಲ ಕಾರ್ಯಕ್ರಮಗಳು ಜರುಗಲಿವೆ ಎಂದರು.

ಹಿರಿಯರಾದ ನಾಗಣ್ಣ ದೇಶಪಾಂಡೆ ಮಾತನಾಡಿ, ಒಂದು ವಾರ ಊರಿನಲ್ಲಿ ಎಲ್ಲ ಕಾರ್ಯಕ್ರಮಗಳು ಅದ್ಧೂರಿಯಿಂದ ಜರುಗಲಿದ್ದು ಅನ್ನ ಪ್ರಸಾದ ವ್ಯವಸ್ಥೆ ನಡೆಯಲಿದೆ. ಊರಿನ ಹೆಣ್ಣುಮಕ್ಕಳು ತವರಿಗೆ ಆಗಮಿಸಿ ದೇವಿಗೆ ಉಡಿ ತುಂಬಿ ಅವಳ ಕೃಪೆಗೆ ಪಾತ್ರರಾಗಬೇಕೆಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.